6:52 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಶ್ರೀ ವೆಂಕಟ್ರಮಣ ದೇವರ ನೂತನ ಚಂದ್ರ ಮಂಡಲ ವಾಹನ ಹಸ್ತಾಂತರ

19/01/2025, 21:44

ಮಂಗಳೂರು(reporterkarnataka.com): ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಇಂದು ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ನಡೆಯಿತು.
ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ​ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು .
ಜನವರಿ 20 ಸೋಮವಾರ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪಾದುಕಾ ಪುರಪ್ರವೇಶ, ನೂತನ ಚಂದ್ರ ಮಂಡಲ ವಾಹನ ಪುರಪ್ರವೇಶ, ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ನಡೆಯಲಿದೆ . ಶ್ರೀ ವೀರ ವೆಂಕಟೇಶ ದೇವರ ಉತ್ಸವ ಕಾರ್ಯಕ್ರಮ ಉದ್ಧಿಶ್ಯ ನೂತನವಾಗಿ ನಿರ್ಮಿಸಲಾದ ಚಂದ್ರಮಂಡಲ ವಾಹನದ ಪುರಪ್ರವೇಶ ಕಾರ್ಯಕ್ರಮ ಜೊತೆಗೆ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಕಾರ್ಯಕ್ರಮ ಪ್ರಯುಕ್ತ ಆಯೋಜಿಸಲಾದ ಶ್ರೀ ಗುರು ಪಾದುಕಾ ಯಾತ್ರೆಯ ಪುರಪ್ರವೇಶ ಹಾಗೂ ಮಂಗಳೂರು ರಥೋತ್ಸವ ಪ್ರಯುಕ್ತ ಶ್ರೀ ದೇವಳಕ್ಕೆ ಆಗಮಿಸಲಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಂದು ರಾತ್ರಿ 7 ಗಂಟೆಗೆ ಸರಿಯಾಗಿ ಡೊಂಗರಕೇರಿಯಲ್ಲಿರುವ ಕೆನರಾ ಹೈ ಸ್ಕೂಲ್ ಬಳಿಯಿಂದ ಮೆರವಣಿಗೆ ಹೊರತು ಡೊಂಗರಕೇರಿ , ನ್ಯೂ ಚಿತ್ರಾ ಜಂಕ್ಷನ್ ಮೂಲಕ ಬಿ . ಎಂ . ಹೈಸ್ಕೂಲ್ ರಸ್ತೆ , ರಥಬೀದಿ ಮೂಲಕ ಶ್ರೀ ದೇವಳಕ್ಕೆ ಭವ್ಯ ಮೆರವಣಿಗೆ ತಲುಪಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು