3:28 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಭೀಕರ ಬೆಂಕಿ ದುರಂತ: ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ

20/01/2025, 16:02

ನವದೆಹಲಿ(reporterkarnataka.com):ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಪ್ರದೇಶದಲ್ಲಿ ಪ್ರದೇಶದ ಶಾಸ್ತಿ ಸೇತುವೆ ಸೆಕ್ಟರ್-19 ಶಿಬಿರದಲ್ಲಿ ಹಾಗೂ ಸೆಕ್ಟರ್-5ರಲ್ಲೂ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.


ಅಗ್ನಿ ಅವಘಡಕ್ಕೆ ಸದ್ಯ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಕೋಟಿ-ಕೋಟಿ ಭಕ್ತರು ಸ್ಥಳದಲ್ಲಿ ಇದ್ದು, ಸಾವು-ನೋವುಗಳ ಕುರಿತು ಯಾವುದೇ ವರದಿ ಈವರೆಗೂ ಆಗಿಲ್ಲ. ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಭಕ್ತರೆಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡೋಡಿ ಹೋಗಿದ್ದು, ಅಗ್ನಿ ಅವಘಡ ವಿಡಿಯೋ ಸದ್ಯ ಹರಿದಾಡುತ್ತಿದೆ. ಸ್ಥಳದಲ್ಲಿ 30ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ವಾನಹಳು ಕಾರ್ಯಾಚರಣೆ ನಡೆಸುತ್ತಿವೆ. ವಿವೇಕಾನಂದ ಸೇವಾ ಸಮಿತಿ ಟೆಂಟ್‌ಗಳಲ್ಲಿ ಆಕಸ್ಮಿಕ ಅಗ್ನಿ ಅವಘಡ ನಡೆದಿದ್ದು ಹಲವು ಟೆಂಟ್‌ಗಳು ಬೆಂಕಿಗೆ ಸಂಪೂರ್ಣ ಆಹುತಿಯಾಗಿವೆ. ಒಂದು ಟೆಂಟ್‌ನಿಂದ ಮತ್ತೊಂದು…ಮಗದೊಂದು ಟೆಂಟ್‌ಗಳಿಗೆ ಬೆಂಕಿ ಆವರಿಸಿಕೊಂಡಿದ್ದು, ಸಿಲಿಂಡ‌ರ್ ಸ್ಪೋಟದಿಂದ ಈ ಅನಾಹುತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು