7:50 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಹೀಗೊಂದು ಹೃದಯ ವಿದ್ರಾಯಕ ಘಟನೆ: ಅತ್ತ ಆಸ್ಪತ್ರೆ ಶವಾಗಾರದಲ್ಲಿ ಹೆಣವಾಗಿ ಮಲಗಿದ್ದ ಅಪ್ಪ; ಇತ್ತ ಮಗಳ ವಿವಾಹ ಸಂಭ್ರಮ

20/01/2025, 18:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅತ್ತ ಆಸ್ಪತ್ರೆಯ ಶವಾಗಾರದಲ್ಲಿ ಅಪ್ಪನ ಶವ. ಇತ್ತ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ವೈಭವ ನಡೆದ ಹೃದಯ ವಿದ್ರಾಯಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.
ಅಪ್ಪ ಮದುವೆ ಓಡಾಟದಲ್ಲಿ ಸುಸ್ತಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಗಳನ್ನು ನಂಬಿಸಿ ಸಂಬಂಧಿಕರು ಈ ವಿವಾಹ ಕಾರ್ಯ ನೆರವೇರಿಸಿದ್ದಾರೆ. ಮೃತರ ಪತ್ನಿಗೂ ಇದೇ ರೀತಿ ಹೇಳಿ ನಂಬಿಸಲಾಗಿತ್ತು.
ಮಗಳ ಮದುವೆ ಲಗ್ನಪತ್ರಿಕೆ ಕೊಡಲು ಹೋಗಿದ್ದ ಅಪ್ಪ
ಚೀಲದ ಪಾಪಣ್ಣನವರ ಮಗ ಚಂದ್ರು (45)
ಅಪಘಾತದಲ್ಲಿ ಸಾವನ್ನಪ್ಪಿದ್ದರು. ಮಗಳಿಗೆ-ಪತ್ನಿಗೆ ಈ ವಿಷಯವನ್ನು ಸಂಬಂಧಿಕರು ತಿಳಿಸದೆ ಚಂದ್ರು ಮಗಳು ದೀಕ್ಷೀತಾಳ ಮದುವೆಯನ್ನು ಇಂದು ಸಂಬಂಧಿಕರು ನೆರವೇರಿಸಿದ್ದಾರೆ.
ನಿನ್ನೆ ಬೆಳಗ್ಗೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಲಗ್ನಪತ್ರಿಕೆ ಕೊಡಲು ಹೋಗಿದ್ದ ಚಂದ್ರು ಅವರು ತರೀಕೆರೆಗೆ ವಾಪಸ್ ಬರುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅಪ್ಪ ಆಸ್ಪತ್ರೆಯಲ್ಲಿ ಇದ್ದಾರೆ ಎಂದು ನಂಬಿಸಿ ಸಂಬಂಧಿಕರು ಆರತಕ್ಷತೆ-ಮದುವೆ ಮುಗಿಸಿದ್ದಾರೆ.
ಇಂದು ಮದುವೆ ಮುಗಿದ ಬಳಿಕ ಪತ್ನಿಗೆ-ಮಗಳಿಗೆ ಕುಟುಂಬಸ್ಥರು ವಿಷಯ ತಿಳಿಸಿದ್ದಾರೆ.
ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಪತ್ನಿ-ಮಗಳ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು