11:33 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಹೀಗೊಂದು ಹೃದಯ ವಿದ್ರಾಯಕ ಘಟನೆ: ಅತ್ತ ಆಸ್ಪತ್ರೆ ಶವಾಗಾರದಲ್ಲಿ ಹೆಣವಾಗಿ ಮಲಗಿದ್ದ ಅಪ್ಪ; ಇತ್ತ ಮಗಳ ವಿವಾಹ ಸಂಭ್ರಮ

20/01/2025, 18:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅತ್ತ ಆಸ್ಪತ್ರೆಯ ಶವಾಗಾರದಲ್ಲಿ ಅಪ್ಪನ ಶವ. ಇತ್ತ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ವೈಭವ ನಡೆದ ಹೃದಯ ವಿದ್ರಾಯಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.
ಅಪ್ಪ ಮದುವೆ ಓಡಾಟದಲ್ಲಿ ಸುಸ್ತಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಗಳನ್ನು ನಂಬಿಸಿ ಸಂಬಂಧಿಕರು ಈ ವಿವಾಹ ಕಾರ್ಯ ನೆರವೇರಿಸಿದ್ದಾರೆ. ಮೃತರ ಪತ್ನಿಗೂ ಇದೇ ರೀತಿ ಹೇಳಿ ನಂಬಿಸಲಾಗಿತ್ತು.
ಮಗಳ ಮದುವೆ ಲಗ್ನಪತ್ರಿಕೆ ಕೊಡಲು ಹೋಗಿದ್ದ ಅಪ್ಪ
ಚೀಲದ ಪಾಪಣ್ಣನವರ ಮಗ ಚಂದ್ರು (45)
ಅಪಘಾತದಲ್ಲಿ ಸಾವನ್ನಪ್ಪಿದ್ದರು. ಮಗಳಿಗೆ-ಪತ್ನಿಗೆ ಈ ವಿಷಯವನ್ನು ಸಂಬಂಧಿಕರು ತಿಳಿಸದೆ ಚಂದ್ರು ಮಗಳು ದೀಕ್ಷೀತಾಳ ಮದುವೆಯನ್ನು ಇಂದು ಸಂಬಂಧಿಕರು ನೆರವೇರಿಸಿದ್ದಾರೆ.
ನಿನ್ನೆ ಬೆಳಗ್ಗೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಲಗ್ನಪತ್ರಿಕೆ ಕೊಡಲು ಹೋಗಿದ್ದ ಚಂದ್ರು ಅವರು ತರೀಕೆರೆಗೆ ವಾಪಸ್ ಬರುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅಪ್ಪ ಆಸ್ಪತ್ರೆಯಲ್ಲಿ ಇದ್ದಾರೆ ಎಂದು ನಂಬಿಸಿ ಸಂಬಂಧಿಕರು ಆರತಕ್ಷತೆ-ಮದುವೆ ಮುಗಿಸಿದ್ದಾರೆ.
ಇಂದು ಮದುವೆ ಮುಗಿದ ಬಳಿಕ ಪತ್ನಿಗೆ-ಮಗಳಿಗೆ ಕುಟುಂಬಸ್ಥರು ವಿಷಯ ತಿಳಿಸಿದ್ದಾರೆ.
ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಪತ್ನಿ-ಮಗಳ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು