8:36 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

20/01/2025, 19:52

ಬೆಂಗಳೂರು(reporterkarnataka.com): ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
*ಹಣ ದುರುಪಯೋಗದ ಪ್ರಶ್ನೆ ಇಲ್ಲ:* ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
*ತಪ್ಪಿತಸ್ಥರ ವಿರುದ್ಧ ಕ್ರಮ:*
ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.

*ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ:*
ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು