9:57 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

1 ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ರೆಕಾರ್ಡ್: ಬಾಲಕಿ ಫಾತಿಮಾ ನಜಫ್ ರಿಗೆ ಸನ್ಮಾನ

20/01/2025, 20:25

ಸುರತ್ಕಲ್(reporterkarnataka.com): ಮೂಡಬಿದ್ರೆಯಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೊಸದಾಗಿ ದಾಖಲೆ ಬರೆದಿರುವ ಅಡ್ಡೂರಿನ ಬಾಲಕಿ ಫಾತಿಮಾ ನಜಫ್ ಅವರನ್ನು ಸುರತ್ಕಲ್ ಅಟ್ಲಾಸ್ ಜ್ಯುವೆಲ್ಲರ್ಸ್ ವತಿಯಿಂದ ವಜ್ರದ ಉಂಗುರ ಕೊಟ್ಟು ಸನ್ಮಾನಿಸಲಾಯಿತು.


ಈ ವೇಳೆ ಸುರತ್ಕಲ್ ಠಾಣಾಧಿಕಾರಿ ರಘು ನಾಯಕ ಅವರು ಬಾಲಕಿಯನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಮಾತಾಡಿದ ಅವರು, ಶಿಕ್ಷಣದ ಜೊತೆಗೆ ಮಕ್ಕಳು ಬಾಲ್ಯದಲ್ಲೇ ಇಂತಹ ಸಾಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಈ ಮೂಲಕ ಹೆತ್ತವರು, ಸಮಾಜದ ಹೆಸರನ್ನು ಎಲ್ಲರೂ ಗುರುತಿಸುವಂತೆ ಮಾಡಬೇಕು. ಬಾಲಕಿಯ ಸಾಧನೆಗೆ ಎಲ್ಲರೂ ಬೆನ್ನುತಟ್ಟಿ ಪ್ರೋತ್ಸಾಹಿಸೋಣ ಎಂದರು.
ಬಳಿಕ ಮಾತಾಡಿದ ಫಾತಿಮಾ ನಜಫ್, ನಾನು ಅಡ್ಡೂರಿನ ಸಹಾರ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ 6ನೇ ತರಗತಿ ಕಲಿಯುತ್ತಿದ್ದೇನೆ. ನನ್ನ ಸಾಧನೆಗೆ ಹೆತ್ತವರು, ಶಾಲಾ ಶಿಕ್ಷಕರ ಸಹಕಾರ ತುಂಬಾ ಇದೆ. ಅವರಿಗೆ ನಾನು ಧನ್ಯವಾದವನ್ನು ಅರ್ಪಿಸುತ್ತೇನೆ ಎಂದರು.
ಅಟ್ಲಾಸ್ ಜ್ಯುವೆಲ್ಲರಿಯ ವ್ಯವಸ್ಥಾಪಕರಾದ ಅಬ್ದುಲ್ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು