4:11 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಜನತಾದರ್ಶನ

21/01/2025, 02:52

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಶಾಸಕ ದರ್ಶನ್ ದ್ರುವನಾರಾಯಣ್ ಅವರಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿರುವ ಶಾಸಕರ ಕಚೇರಿಯಲ್ಲಿ ಇಂದು ಜನತಾದರ್ಶನ ಕಾರ್ಯಕ್ರಮ ನಡೆಯಿತು.
ಪ್ರತಿ ಸೋಮವಾರ ನಂಜನಗೂಡು ಹಾಗೂ ಹುಲ್ಲಹಳ್ಳಿಯಲ್ಲಿ ನಡೆಸಿಕೊಂಡು ಬರುತ್ತಿರುವ ಜನಸಂಪರ್ಕ ಸಭೆ ಇದಾಗಿದೆ.
ಸಭೆಯಲ್ಲಿ ನಂಜನಗೂಡು ಪಟ್ಟಣವು ಸೇರಿದಂತೆ ನಂಜನಗೂಡು ಸುತ್ತಮುತ್ತಲಿನ ಹಾಗೂ ಹುಲ್ಲಹಳ್ಳಿಯಲ್ಲಿ ಹುಲ್ಲಹಳ್ಳಿ ಪಟ್ಟಣವು ಸೇರಿದಂತೆ ಸುತ್ತಮುತ್ತಲಿನ ನಾಗರಿಕರು ಬಂದು ಶಾಸಕರನ್ನ ಭೇಟಿ ಮಾಡಿ ತಮ್ಮ ಸಮಸ್ಯೆ ಹಾಗೂ ಕುಂದುಕೊರತೆಗಳ ಅಹವಾಲನ್ನು ತಿಳಿಸುವ ಕಾರ್ಯಕ್ರಮ ಇದಾಗಿರುತ್ತದೆ.
ಸಾರ್ವಜನಿಕರು ನೇರವಾಗಿ ಬಂದು ಶಾಸಕರಲ್ಲಿ ತಮ್ಮ ಕುಂದು ಕೊರತೆ ಹಾಗೂ ಸಮಸ್ಯೆಗಳನ್ನು ತಿಳಿಸಿ ಮನವಿ ನೀಡುತ್ತಾರೆ. ಸಾರ್ವಜನಿಕರ ಮನವಿಗೆ ಸ್ಪಂದಿಸುವ ಶಾಸಕರು ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರೆ ಮತ್ತೆ ಕೆಲವು ಕುಂದು ಕೊರತೆಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಫೋನ್ ಮುಖಾಂತರ ತಿಳಿಸಿ ಬಗೆಹರಿಸಲು ಮುಂದಾಗುತ್ತಾರೆ.
ಮಹಿಳೆಯರು, ವೃದ್ಧರು, ವಿಕಲಚೇತನರು ಸೇರಿದಂತೆ ಪಕ್ಷದ ಕಾರ್ಯಕರ್ತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಾಲಿನಲ್ಲಿ ನಿಂತು ಶಾಸಕರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸುತ್ತಾರೆ.
ಸಾಲಿನಲ್ಲಿ ಬರುವ ಮಹಿಳೆಯರು, ವಿಕಲಚೇತನರು ಹಾಗು ಹಿರಿಯ ನಾಗರಿಕರಿಗೆ ಮೊದಲು ಶಾಸಕರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸಿ ನಂತರ ಪಕ್ಷದ ಕಾರ್ಯಕರ್ತ ಮುಖಂಡರಿಗೆ ನೀಡುತ್ತಿರುವುದು ವಿಶೇಷವಾಗಿದೆ.


ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ನಾನು ಶಾಸಕನಾಗಿ ಆಯ್ಕೆ ಆದಾಗಿನಿಂದ ಪ್ರತಿ ಸೋಮವಾರ ನಂಜನಗೂಡು ಮತ್ತು ಹುಲ್ಲಳ್ಳಿಯಲ್ಲಿ ಈ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದೇನೆ. ಸಾರ್ವಜನಿಕರ ಕುಂದು ಕೊರತೆ ಹಾಗೂ ಸಮಸ್ಯೆಗಳನ್ನು ಖುದ್ದಾಗಿ ತಿಳಿದು ಅಧಿಕಾರಿಗಳ ನೆರವಿನೊಂದಿಗೆ ಅವರ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗುತ್ತದೆ ಎಂದು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್ ತಾಲೂಕು ಕಚೇರಿ ಶಿರಸ್ತೆದಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು