6:28 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಜನತಾದರ್ಶನ

21/01/2025, 02:52

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಶಾಸಕ ದರ್ಶನ್ ದ್ರುವನಾರಾಯಣ್ ಅವರಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿರುವ ಶಾಸಕರ ಕಚೇರಿಯಲ್ಲಿ ಇಂದು ಜನತಾದರ್ಶನ ಕಾರ್ಯಕ್ರಮ ನಡೆಯಿತು.
ಪ್ರತಿ ಸೋಮವಾರ ನಂಜನಗೂಡು ಹಾಗೂ ಹುಲ್ಲಹಳ್ಳಿಯಲ್ಲಿ ನಡೆಸಿಕೊಂಡು ಬರುತ್ತಿರುವ ಜನಸಂಪರ್ಕ ಸಭೆ ಇದಾಗಿದೆ.
ಸಭೆಯಲ್ಲಿ ನಂಜನಗೂಡು ಪಟ್ಟಣವು ಸೇರಿದಂತೆ ನಂಜನಗೂಡು ಸುತ್ತಮುತ್ತಲಿನ ಹಾಗೂ ಹುಲ್ಲಹಳ್ಳಿಯಲ್ಲಿ ಹುಲ್ಲಹಳ್ಳಿ ಪಟ್ಟಣವು ಸೇರಿದಂತೆ ಸುತ್ತಮುತ್ತಲಿನ ನಾಗರಿಕರು ಬಂದು ಶಾಸಕರನ್ನ ಭೇಟಿ ಮಾಡಿ ತಮ್ಮ ಸಮಸ್ಯೆ ಹಾಗೂ ಕುಂದುಕೊರತೆಗಳ ಅಹವಾಲನ್ನು ತಿಳಿಸುವ ಕಾರ್ಯಕ್ರಮ ಇದಾಗಿರುತ್ತದೆ.
ಸಾರ್ವಜನಿಕರು ನೇರವಾಗಿ ಬಂದು ಶಾಸಕರಲ್ಲಿ ತಮ್ಮ ಕುಂದು ಕೊರತೆ ಹಾಗೂ ಸಮಸ್ಯೆಗಳನ್ನು ತಿಳಿಸಿ ಮನವಿ ನೀಡುತ್ತಾರೆ. ಸಾರ್ವಜನಿಕರ ಮನವಿಗೆ ಸ್ಪಂದಿಸುವ ಶಾಸಕರು ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರೆ ಮತ್ತೆ ಕೆಲವು ಕುಂದು ಕೊರತೆಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಫೋನ್ ಮುಖಾಂತರ ತಿಳಿಸಿ ಬಗೆಹರಿಸಲು ಮುಂದಾಗುತ್ತಾರೆ.
ಮಹಿಳೆಯರು, ವೃದ್ಧರು, ವಿಕಲಚೇತನರು ಸೇರಿದಂತೆ ಪಕ್ಷದ ಕಾರ್ಯಕರ್ತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಾಲಿನಲ್ಲಿ ನಿಂತು ಶಾಸಕರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸುತ್ತಾರೆ.
ಸಾಲಿನಲ್ಲಿ ಬರುವ ಮಹಿಳೆಯರು, ವಿಕಲಚೇತನರು ಹಾಗು ಹಿರಿಯ ನಾಗರಿಕರಿಗೆ ಮೊದಲು ಶಾಸಕರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸಿ ನಂತರ ಪಕ್ಷದ ಕಾರ್ಯಕರ್ತ ಮುಖಂಡರಿಗೆ ನೀಡುತ್ತಿರುವುದು ವಿಶೇಷವಾಗಿದೆ.


ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ನಾನು ಶಾಸಕನಾಗಿ ಆಯ್ಕೆ ಆದಾಗಿನಿಂದ ಪ್ರತಿ ಸೋಮವಾರ ನಂಜನಗೂಡು ಮತ್ತು ಹುಲ್ಲಳ್ಳಿಯಲ್ಲಿ ಈ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದೇನೆ. ಸಾರ್ವಜನಿಕರ ಕುಂದು ಕೊರತೆ ಹಾಗೂ ಸಮಸ್ಯೆಗಳನ್ನು ಖುದ್ದಾಗಿ ತಿಳಿದು ಅಧಿಕಾರಿಗಳ ನೆರವಿನೊಂದಿಗೆ ಅವರ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗುತ್ತದೆ ಎಂದು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್ ತಾಲೂಕು ಕಚೇರಿ ಶಿರಸ್ತೆದಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು