12:43 AM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

60 ಪರ್ಸೆಂಟ್‌ ವಸೂಲಿಯ ನೆನಪಿನ ಜಾತ್ರೆ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಲೇವಡಿ

21/01/2025, 19:28

ಬೆಂಗಳೂರು(reporterkarnataka.com): ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು ಪ್ರೀತಿ ಇದ್ದರೆ, ಕಾಂಗ್ರೆಸ್‌ ಭವನಕ್ಕೆ ಗಾಂಧೀಜಿ ಅಥವಾ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹೆಸರಿಡಬೇಕಿತ್ತು. ಸೋನಿಯಾ ಗಾಂಧಿಯಾಗಲೀ, ರಾಹುಲ್‌ ಗಾಂಧಿಯಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರಿಗೆ ಗಾಂಧೀಜಿಯ ಹೆಸರು ಹೇಳುವ ನೈತಿಕತೆ ಇಲ್ಲ. ಇದು 60 ಪರ್ಸೆಂಟ್‌ ವಸೂಲಿ ಮಾಡುವ ನೆನಪಿನ ಜಾತ್ರೆಯೇ ಹೊರತು ಸಮಾವೇಶವಲ್ಲ ಎಂದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಸುವಿನ ಕೆಚ್ಚಲು ಕತ್ತರಿಸಿದ್ದು, ಬ್ಯಾಂಕ್‌ ದರೋಡೆ, ಮಹಿಳೆ ಮೇಲೆ ಅತ್ಯಾಚಾರ ಮೊದಲಾದ ಘಟನೆಗಳನ್ನು ಕಡೆಗಣಿಸಿ ಸರ್ಕಾರ ಸಮಾವೇಶ ಮಾಡಿದೆ. ಅಭಿವೃದ್ಧಿ ಬಗ್ಗೆ ಕೇಳಿದರೆ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸುತ್ತಾರೆ ಎಂದರೆ ಕಾಂಗ್ರೆಸ್‌ ಹೇಗೆ ಭಿನ್ನವಾಗುತ್ತದೆ? ಕಾಂಗ್ರೆಸ್‌ ಶಾಸಕರು ಕೂಡ ಅನುದಾನ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ಗಾಂಧೀಜಿಯಂತೆ ಸರಳವಾಗಿರಬೇಕು ಎಂದು ಹೇಳಿದ್ದಾರೆ. ಆದರೆ ಕಟೌಟ್‌ಗಳ ವಿಜೃಂಭಣೆ ಅಲ್ಲಿ ಕಂಡುಬಂದಿದೆ. ಇದು ನಕಲಿ ಗಾಂಧಿಗಳ ಸಮಾವೇಶ ಎಂದು ಅವರು ನುಡಿದರು.
*ಕ್ಷಮೆ ಯಾಚಿಸಿ:*
ಕಿತ್ತೂರು ರಾಣಿ ಚೆನ್ನಮ್ಮ ಕರ್ನಾಟಕದ ವೀರ ಮಹಿಳೆ. ಅವರನ್ನು ಪ್ರಿಯಾಂಕಾ ವಾದ್ರಾಗೆ ಹೋಲಿಕೆ ಮಾಡುವುದು ಅಕ್ಷಮ್ಯ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕೂಡಲೇ ಜನರ ಕ್ಷಮೆ ಯಾಚಿಸಬೇಕು. ಇದರಿಂದ ಚೆನ್ನಮ್ಮಳಿಗೆ ಅಪಮಾನವಾಗಿದೆ. ಕಾಂಗ್ರೆಸ್‌ ಪಕ್ಷ ಕೂಡ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಸಂಘಟನಾ ಸಭೆ ನಡೆದಿದ್ದು, ತಾಲೂಕು ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ. ಕೇಂದ್ರ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಬಂದ ನಂತರ ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆಯಾಗಲಿದೆ. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ನಾವ್ಯಾರೂ ತೀರ್ಮಾನ ಮಾಡುವುದಿಲ್ಲ. ಅದನ್ನು ಹಿರಿಯ ನಾಯಕರು ಮಾತ್ರ ಮಾಡುತ್ತಾರೆ. ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೇ ವರಿಷ್ಠರ ಜೊತೆ ಮಾತನಾಡಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು