6:40 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಉಚ್ಚಿಲದಲ್ಲಿ ನಿರಂತರ ರಸ್ತೆ ಅಪಘಾತ: ಅವೈಜ್ಞಾನಿಕ ಕಾಮಗಾರಿ ಎಂದು ಆರೋಪಿಸಿ ಹೆದ್ದಾರಿ ತಡೆದು ಪ್ರತಿಭಟನೆ

21/01/2025, 21:34

ಉಡುಪಿ(reporterkarnataka.com): ಉಚ್ಚಿಲ ಪೇಟೆಯಲ್ಲಿ ನಿರಂತರ ಅಪಘಾತಗಳು ನಡೆಯುತ್ತಿರುವುದಕ್ಕೆ ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಆರೋಪಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಚ್ಚಿಲದಲ್ಲಿ ರಾಷ್ಟ್ರೀಯ ಹೆದ್ದಾರಿ 66 ತಡೆದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಉಚ್ಚಿಲ ಪೇಟೆಯಲ್ಲಿ ಪ್ರತಿಭಟನಾ ಸಭೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ವಿನಯಕುಮಾರ್ ಸೊರಕೆ, ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಸಿರಾಜ್ ಉಚ್ಚಿಲ ಸಹಿತ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟುಹಿಡಿದರು. ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ನಿಲ್ಲಿಸಿ ಮನವಿ ಸಲ್ಲಿಸಲಾಯಿತು.
ಸ್ಥಳಕ್ಕೆ ಬಂದ ಹೆದ್ದಾರಿ ಪ್ರಾಧಿಕಾರದ ಪ್ರಾದಿಕಾರದ ಯೋಜನಾಧಿಕಾರಿ ಜಾವೇದ್ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು ಕೂಡಲೇ ಸಮಸ್ಯೆಗೆ ಪರಿಹರಿಸದಿದ್ದಲ್ಲಿ ಮುಂದೆ ಇನ್ನಷ್ಟು ಉಗ್ರರೀತಿಯ ಪ್ರತಿಭಟನೆ ಎದುರಿಸಬೆಕಾದೀತು ಎಂದು ಎಚ್ಚರಿಸಿದರು.
ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಪ್ರತಿಭಟನಾಕಾರ ರನ್ನು ಸಮಾಧಾನಪಡಿಸಿ ಶೀಘ್ರದಲ್ಲೇ ಉಡುಪಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹೆದ್ದಾರಿ ಸುರಕ್ಷತಾ ಸಭೆಯನ್ನು ಕರೆದು ಇಲ್ಲಿನ ಸಮಸ್ಯೆಗಳ ಪರಿಹರಿಸ ಲಾಗುವುದು ಎಂದು ಹೇಳಿದರು.
ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್ ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ ಹೆದ್ದಾರಿ ದೀಪ ಅಳವಡಿಕೆ, ಉಚ್ಚಿಲ ಪೇಟೆಯಲ್ಲಿ ಹೈಮಾಸ್ಕ್ ದೀಪ ಅಳವಡಿಕೆ, ಹೆದ್ದಾರಿಯಲ್ಲಿ ಝೀಬ್ರಾ ಕ್ರಾಸಿಂಗ್, ಸಮರ್ಪಕ ಕ್ರಾಸಿಂಗ್ ವ್ಯವಸ್ಥೆ, ಸರ್ವಿಸ್ ರಸ್ತೆ ಡಿವೈಡರಿಗೆ ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂಬ ಬೇಡಿಕೆ ಇದೆ.
ಪ್ರತಿಭಟನಾ ಸಂದರ್ಭ ಉಚ್ಚಿಲ ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದರು. ಪ್ರತಿಭಟನಾ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಾಮಾಜಿಕ ಹೋರಾಗಾರ ಶೇಖರ್ ಹೆಜಮಾಡಿ, ಎಂ.ಎ ಗಫುರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು