3:22 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ

21/01/2025, 22:38

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸುಮಾರು 10 ಕೋಟಿ ರೂ. ಮೌಲ್ಯದ ನಗ ಮತ್ತು ನಗದು ದರೋಡೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವೈಯಲ್ಲಿ ಈ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುರುಗನ್, ರಾಜೇಂದ್ರನ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಮಾಹಿತಿ ಲಭ್ಯವಾಗಿಲ್ಲ.
ಮುಂಬೈಯ ಧಾರಾವಿಯಲ್ಲಿ 10 ಮಂದಿಯ ಖತರ್ನಾಕ್ ಗ್ಯಾಂಗ್ ಬ್ಯಾಂಕ್ ದರೋಡೆಗೆ ಪ್ಲಾನ್ ಹಾಕಿತ್ತು. ಈ ಗ್ಯಾಂಗ್ ನಿಂದ ಇಬ್ಬರನ್ನು ಹೊರಗಿಡಲಾಗಿತ್ತು. ಈ ಹೊರಗಿಟ್ಟ ಇಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯಂತೆ ಮುಂಬೈ ಪೊಲೀಸರು ಅವರ ಮನೆಯ ಮೇಲೆ ನಿಗಾ ಇಟ್ಟಿದ್ದರು. ಈ ನಡುವೆ ದರೋಡೆಕೋರರಲ್ಲಿ ಒಬ್ಬನಾದ ಮುರುಗನ್ ಮಂಗಳೂರಿನ ಕೋಟೆಕಾರಿಗೆ ಬಂದು ಕೋಟೆಕಾರು ಸಹಕಾರಿ ಸಂಘದಿಂದ ನಗ ಮತ್ತು ನಗದು ದೋಚುವ ಪ್ಲಾನ್ ಹಾಕಿದ್ದ. ಈ ಪ್ಲಾನ್ ನಂತೆ ದರೋಡೆ ನಡೆದಿದೆ. ಈ ಬಗ್ಗೆ ಮಂಗಳೂರು ಪೊಲೀಸರಿಗೆ ಮುಂಬೈ ಪೊಲೀಸರು ಮಾಹಿತಿ ನೀಡಿದ್ದರು. ಮುಂಬೈ ಪೊಲೀಸರು ನೀಡಿದ ಸುಳಿವಿನ ಆಧಾರದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದರೋಡೆಕೋರರು ಸಹಕಾರಿ ಸಂಘ ಲೂಟಿ ಮಾಡಿದ ಬಳಿಕ ಕೇರಳ ಮಾರ್ಗವಾಗಿ ಫಿಯೆಟ್ ಕಾರಿನಲ್ಲಿ ಹಣ ಮತ್ತು ಚಿನ್ನದ ಗೋಣಿಯನ್ನು ಒಯ್ದಿದ್ದರು. ಫಿಯೆಟ್ ಕಾರಿನಲ್ಲೇ ಸುಮಾರು 700 ಕಿಮೀ. ಪ್ರಯಾಣ ನಡೆಸಿದ್ಸರು ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು