4:25 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಇತ್ತೀಚಿನ ಸುದ್ದಿ

ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು, ಆಸ್ಪತ್ರೆಗೆ ದಾಖಲು

21/01/2025, 23:46

ಮಂಗಳೂರು(reporterkarnataka.com): ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ.

ತಮಿಳುನಾಡಿನ ತಿರುವೈಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರು ಪೊಲೀಸರು ಸ್ಥಳ ಮಹಜರಿಗೆ ಕರೆದು ತಂದಿದ್ದರು.
ಆರೋಪಿಗಳನ್ನು ಉಳ್ಳಾಲಕ್ಕೆ ಕರೆದೊಯ್ಯುತ್ತಿದ್ದ ವೇಳೆ ಕೆ.ಸಿ. ರೋಡ್ ಬಳಿ ಕಣ್ಣನ್ ಮಣಿ (35) ಎಂಬಾತನ ಪರಾರಿಯಾಗಲು ಯತ್ನಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿಯ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಪೊಲೀಸರು ಗಾಯಗೊಂಡಿದ್ದಾರೆ.
ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿ.
ಸದ್ಯ ಮುಂಬೈ ನಗರದ ಚೆಂಬೂರಿನಲ್ಲಿ ನೆಲೆಸಿದ್ದಾನೆ. ಧಾರಾವಿ ಗ್ಯಾಂಗ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಣಿಯನ್ನು ಮಂಗಳೂರು ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಸ್ಥಳ ಮಹಜರು ನಡೆಸುವ ಸಲುವಾಗಿ ತಲಪಾಡಿ ಬಳಿಯ ಕೆ.ಸಿ. ರೋಡ್ ಅಲಂಕಾರ ಗುಡ್ಡೆಗೆ ಕರೆದೊಯ್ದಿದ್ದರು. ಅಲ್ಲಿ ಜೀಪಿನಿಂದ ಇಳಿಯುತ್ತಲೇ ಪೊಲೀಸರಿಗೆ ಹಲ್ಲೆಗೈದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯ ಚೂರಿನಿಂದ ಹಲ್ಲೆಗೆ ಯತ್ನಿಸಿದ್ದು ಸಿಸಿಬಿ ಇನ್ಸ್ ಪೆಕ್ಟರ್ ಆರೋಪಿ ಕಾಲಿಗೆ ಗುಂಡೇಟು ಹೊಡೆದಿದ್ದಾರೆ.
ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಪೇದೆಗಳಾದ ಆಂಜಿನಪ್ಪ, ನಿತಿನ್ ಎಂಬವರಿಗೆ ಗಾಯಗಳಾಗಿವೆ. ಗಾಯಗೊಂಡ ಪೊಲೀಸರು ಮತ್ತು ಆರೋಪಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡೇಟು ಪ್ರಕರಣದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು