3:51 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ನಂಜನಗೂಡು ನಗರ ಸಭೆ ಆಯವ್ಯಯ ಪೂರ್ವಭಾವಿ ಸಭೆ: ದೂರ ಉಳಿದ ಸಾರ್ವಜನಿಕರು, ಸಂಘ- ಸಂಸ್ಥೆಗಳು!

22/01/2025, 13:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ನಂಜನಗೂಡು ನಗರವೂ ಕೂಡ ಒಂದಾಗಿದ್ದು ಪುರಸಭೆಯಿಂದ ನಗರಸಭೆಯಾಗಿ ಬಡ್ತಿ ಪಡೆದು ಸುಮಾರು ವರ್ಷಗಳೇ ಕಳೆದಿವೆ


ಪ್ರತಿ ವರ್ಷದಂತೆ 2025 -26ನೇ ಸಾಲಿನ ಆಯ ವ್ಯಯ ಪೂರ್ವಭಾವಿ ಸಭೆಯಲ್ಲಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸಲಹೆ ಸೂಚನೆಗಳನ್ನು ತಿಳಿಸಿ ಪರಿಹಾರ ಕಲ್ಪಿಸಿಕೊಡುವ ಯಾವೊಬ್ಬ ಸಾರ್ವಜನಿಕರು ಕೂಡ ಆಯವ್ಯಯ ಪೂರ್ವಭಾವಿ ಸಭೆಗೆ ಆಗಮಿಸದೆ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಆಡಳಿತಕ್ಕೆ ಮುಖಭಂಗವಾಗಿರುವ ಘಟನೆ ನಡೆದಿದೆ.
ನಂಜನಗೂಡು ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಪೌರಾಯುಕ್ತರಾದ ವಿಜಯ್ ನೇತೃತ್ವದಲ್ಲಿ 2025 -26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಪ್ರತಿ ವರ್ಷ ನಡೆಯುವ ಸಭೆಯಲ್ಲಿ ಸಾರ್ವಜನಿಕರು ಹಾಗೂ ವಿವಿಧ ಪರ ಸಂಘಟನೆಗಳ ಮುಖಂಡರು ಪೂರ್ವಭಾವಿ ಸಭೆಗೆ ಆಗಮಿಸಿ ಬಜೆಟ್ ನಲ್ಲಿ ಹೊಸದಾಗಿ ಸೇರಿಸಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಮ್ಮ, ತಮ್ಮ ಸಲಹೆ ಸೂಚನೆಗಳು ಮತ್ತು ಅಭಿಪ್ರಾಯಗಳನ್ನು ನೀಡುವುದು ವಾಡಿಕೆ. ಆದರೆ ಈ ಬಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಪರಿಣಾಮ ಸರ್ಕಾರ ಹಣಕಾಸಿನ ದುಸ್ಥಿತಿಯನ್ನು ಎದುರಿಸುತ್ತಿದ್ದು ಯಾವ ಅಭಿವೃದ್ಧಿ ಕೆಲಸಗಳು ನಡೆಯುವುದಿಲ್ಲ ಎಂಬ ವಿಚಾರ ಅರಿತಿರುವ ಸಾರ್ವಜನಿಕರು ಮತ್ತು ಸಂಘಟಕರುಗಳು ಪೂರ್ವಭಾವಿ ಸಭೆಗೆ ಗೈರಾಗಿರಬಹುದು ಎನ್ನಲಾಗಿದೆ.
ಈಗಾಗಲೇ ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಹಣಕಾಸಿನ ಕೊರತೆಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಮಾಹಿತಿಯನ್ನು ಅರಿತಿರುವ ನಂಜನಗೂಡಿನ ವಾಸಿಗಳು ಹಾಗೂ ಸಾರ್ವಜನಿಕರು ಪೂರ್ವಭಾವಿ ಸಭೆಗೆ ಹೋಗಿ ಸುಮ್ಮನೆ ಕಾಲಹರಣ ಮಾಡುವುದರ ಬದಲಾಗಿ ಸಭೆಗೆ ಹೋಗದಿರುವುದೇ ಮೇಲು ಎಂಬ ನಿರ್ಧಾರಕ್ಕೆ ಬಂದೋ ಅಥವಾ ನಗರ ಸಭೆಯವರ ಪ್ರಚಾರದ ಕೊರತೆಯಿಂದಲೊ ಸಾರ್ವಜನಿಕರು ಸಭೆಗೆ ಬಾರದೆ ಯಾವುದೇ ವಿಚಾರಗಳು ಸಭೆಯಲ್ಲಿ ಚರ್ಚೆಯಾಗದೆ ಕೇವಲ ಬೆರಳೆಣಿಕೆಯಷ್ಟು ಪತ್ರಕರ್ತರು, ಸಾರ್ವಜನಿಕರು ಹಾಗೂ ನಗರಸಭಾ ಸಿಬ್ಬಂದಿಗಳಿಗೆ ಅಧ್ಯಕ್ಷ ಶ್ರೀಕಂಠ ಸ್ವಾಮಿ ಹಾಗೂ ಪೌರಾಯುಕ್ತ ವಿಜಯ್ ನಂಜನಗೂಡು ನಗರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ ಉತ್ತಮ ಬಜೆಟ್ ನೀಡುವ ಆರಿಕೆ ಮಾತುಗಳನ್ನಾಡಿ ತರಾತುರಿಯಲ್ಲಿ ಆಯ ವ್ಯಯ ಸಭೆಯನ್ನು ಮುಕ್ತಾಯಗೊಳಿಸಿದರು.
ಪೂರ್ವಾಭಾವಿ ಸಭೆಯಲ್ಲಿ ಸಾರ್ವಜನಿಕರ ಕೊರತೆಯಿಂದ ಎದ್ದು ಕಾಣುತ್ತಿದ್ದ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಸದಸ್ಯರು ಮೌನಕ್ಕೆ ಶರಣಾಗಿದ್ದರು ಎನ್ನುವಂತಿತ್ತು.
ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಉಪಾಧ್ಯಕ್ಷರಾದ ರೆಹನಾ ಬಾನು, ನಗರ ಸಭಾ ಪೌರಾಯುಕ್ತರಾದ ವಿಜಯ್, ಸದಸ್ಯರುಗಳಾದ ಮಹದೇವ ಪ್ರಸಾದ್, ಗಾಯತ್ರಿ ಮೋಹನ್, ಸಿದ್ದಿಕ್ಅಹ್ಮದ್, ಮಹೇಶ್ ಅತ್ತಿಕಾನೆ ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು