2:52 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಿಜೈ ಯುನಿಸೆಕ್ಸ್ ಸಲೂನ್ ದಾಳಿ ಪ್ರಕರಣ: ಪ್ರಸಾದ್ ಅತ್ತಾವರ ಬಂಧನ

23/01/2025, 17:41

ಮಂಗಳೂರು(reporterkarnataka.com): ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಯುನಿಸೆಕ್ಸ್ ಸಲೂನ್ ಗೆ ತಂಡವೊಂದು ಗುರುವಾರ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಪ್ರಸಾದ್ ಅತ್ತಾವರ ಅವರನ್ನು ಬಂಧಿಸಲಾಗಿದೆ.
ದಾಳಿ ನಡೆಸಿದ ತಂಡ ಸೆಲೂನಿನ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿ ಪೀಠೋಕರಣಗಳಿಗೆ ಹಾನಿ ಮಾಡಿತ್ತು.
ಬಿಜೈಯ ಕಲರ್ಸ್ ಯುನಿಸೆಕ್ಸ್ ಸಲೂನ್ ಗೆ ಸುಮಾರು 9-10 ಅಪರಿಚಿತ ವ್ಯಕ್ತಿಗಳ ತಂಡ ಪ್ರವೇಶಿಸಿ ಸೆಲೂನಿನ ಪೀಠೋಕರಣಗಳಿಗೆ ಹಾನಿ ಮಾಡಿತ್ತು. ತಂಡವು ಅನೈತಿಕ ಚಟುವಟಿಕೆಗಳನ್ನು ಆರೋಪಿಸಿ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿತ್ತು. ಈ ವೇಳೆ ಇಬ್ಬರು ಸಿಬ್ಬಂದಿಯ ಮೇಲೂ ಹಲ್ಲೆಯೂ ನಡೆದಿತ್ತು. ಈ ಕುರಿತು ಸೆಲೂನ್ ಮಾಲಿಕರು ದೂರು ನೀಡಿದ್ದರು. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು