11:50 PM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಮಂಗಳೂರು ಪ್ಲಾಸ್ಟಿಕ್ ಪಾರ್ಕ್; ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಿ: ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ

24/01/2025, 20:57

ಮಂಗಳೂರು(reporterkarnataka.com): ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದಿದ್ದು, ಭೂವಿವಾದಿತ 9.33 ಎಕರೆ ಜಾಗ ಕೈಬಿಟ್ಟು ಪರಿಷ್ಕೃತ ಯೋಜನೆ ಸಿದ್ಧಪಡಿಸಿ ಶೀಘ್ರ ಅದರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.
ಗಂಜಿಮಠದಲ್ಲಿ104 ಎಕರೆಯಲ್ಲಿ ಕರಾವಳಿಯ ಮಹಾತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ದಿ. ಅನಂತ ಕುಮಾರ್ ರಾಸಾಯನಿಕ ಸಚಿವರಾಗಿದ್ದಾಗ ಮಂಜೂರಾತಿ ನೀಡಿದ್ದರು. 2022ರಲ್ಲಿ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದರೂ 9.33 ಎಕರೆ ಭೂಸ್ವಾಧೀನ ವಿಚಾರ ನ್ಯಾಯಾಲಯದಲ್ಲಿರುವುದರಿಂದ ಸಾಕಷ್ಟು ವಿಳಂಬವಾಗಿದೆ. ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಪ್ರಗತಿ ನಡೆಯದಿರುವುದು ಕಂಡುಬಂದಿದೆ ಎಂದು ಕ್ಯಾ. ಚೌಟ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲಿ 9.33 ಎಕರೆ ಭೂಸ್ವಾಧೀನ ವಿವಾದದಿಂದಾಗಿ ಯೋಜನೆ ಕಾರ್ಯರೂಪಕ್ಕೆ ತರಲು ಹಿನ್ನಡೆಯಾಗಿರುವುದಾಗಿ ಕೆಐಎಡಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಿರುವಾಗ, ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ತಯಾರಿಸಿ ಉಳಿದ ಜಾಗ ಅಭಿವೃದ್ಧಿಸಬೇಕು. ಆ ಮೂಲಕ ಯೋಜನೆ ಅನುಷ್ಠಾನ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ.
ಆರಂಭದಲ್ಲಿ ಹಲವು ಪ್ಲಾಸ್ಟಿಕ್‌ ಕಂಪೆನಿಗಳು ಉದ್ದೇಶಿತ ಪ್ಲಾಸ್ಟಿಕ್‌ ಪಾರ್ಕ್‌ನಲ್ಲಿ ಘಟಕ ಸ್ಥಾಪಿಸುವುದಕ್ಕೆ ಮುಂದಾಗಿದ್ದವು. ಆದರೆ, ಪಾರ್ಕ್‌ ನಿರ್ಮಾಣ ಕಾರ್ಯ ವಿಳಂಬವಾದ ಕಾರಣ ಉದ್ಯಮಿಗಳು ಬೇರೆಡೆ ಆಸಕ್ತಿ ತೋರಿಸಿದ್ದಾರೆ. ಇದು ಸಹಜವಾಗಿಯೇ ನಮ್ಮ ಕರಾವಳಿಯ ಇತರೆ ಯೋಜನೆಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ, ಆದಷ್ಟು ಬೇಗ ಈ ಯೋಜನೆಗೆ ಎದುರಾಗಿರುವ ಅಡ್ಡಿ ದೂರ ಮಾಡಿ ಮಂಗಳೂರಿನ ಪ್ಲಾಸ್ಟಿಕ್‌ ಪಾರ್ಕ್‌ನಲ್ಲಿ ಬಂಡವಾಳ ಹೂಡುವುದಕ್ಕೆ ಉದ್ದಿಮೆದಾರರನ್ನು ಆಕರ್ಷಿಸಲು ತಾವು ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಐಎಡಿಬಿ ಮುಖ್ಯ ಎಂಜಿನಿಯರ್‌ಗೆ ಬರೆದಿರುವ ಪತ್ರದಲ್ಲಿ ಕ್ಯಾ. ಚೌಟ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು