8:58 PM Thursday19 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ಮನೆ ಸೀಝ್ ಮಾಡಿ ಬಾಣಂತಿ- ಮಗುವನ್ನು ಹೊರಹಾಕಿದ ಖಾಸಗಿ ಫೈನಾನ್ಸ್: ಬೀಗ ತೆರವುಗೊಳಿಸಿದ ಸಚಿವೆ ಹೆಬ್ಬಾಳ್ಕರ್

24/01/2025, 21:49

ಬೆಳಗಾವಿ(reporterkarnataka.com):ಸಾಲ ಮರುಪಾವತಿಸಿಲ್ಲ ಎನ್ನುವ ಕಾರಣಕ್ಕೆ ಬಾಣಂತಿ ಸೇರಿದಂತೆ ಕುಟುಂಬದವರನ್ನೆಲ್ಲ ಹೊರ ಹಾಕಿ ಬೀಗ ಹಾಕಲಾಗಿದ್ದ ಪ್ರಕರಣಕ್ಕೆ ತ್ವರಿತವಾಗಿ ಸ್ಪಂದಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮನೆಯ ಬೀಗ ತೆರವುಗೊಳಿಸಿ ಕುಟುಂಬದವರನ್ನು ಮನೆಗೆ ಸೇರಿಸಿದ್ದಾರೆ.
ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಮಾಧುರಿ ಲೋಹಾರ್ ಎನ್ನುವ ಬಾಣಂತಿ ಮತ್ತು ಅವರ ಕುಟುಂಬದವರು ಸಾಲ ತೀರಿಸಿಲ್ಲ ಎಂದು ಆರೋಪಿಸಿ ಖಾಸಗಿ ಹಣಕಾಸು ಸಂಸ್ಥೆಯವರು ಹಸಿ ಬಾಣಂತಿ ಸೇರಿದಂತೆ ಕುಟುಂಬಸ್ಥರನ್ನು ಮನೆಯಿಂದ ಹೊರಹಾಕಿ ಸೀಜ್ ಮಾಡಿದ್ದರು.
ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಸುದ್ದಿ ತಿಳಿದ ತಕ್ಷಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ತಮ್ಮ ಆಪ್ತ ಸಹಾಯಕರನ್ನು ಸ್ಥಳಕ್ಕೆ ಕಳಿಸಿ ಕುಟುಂಬಕ್ಕೆ ಆಹಾರ, ಧಾನ್ಯಗಳನ್ನು ಮತ್ತು ಸ್ವಲ್ಪಮಟ್ಟಿಗೆ ಆರ್ಥಿಕ ನೆರವನ್ನು ಒದಗಿಸಿದರು.
ನಂತರ ಹಣಕಾಸು ಸಂಸ್ಥೆಯ ಪ್ರತಿನಿಧಿಗಳ ಜೊತೆ ಮಾತನಾಡಿ, ಸಾಲ ಮರುಪಾವತಿಸಲು ಸಮಯಾವಕಾಶ ಕೊಡಿಸಿದ್ದಲ್ಲದೆ, ಮನೆಯ ಬೀಗ ತೆರವು ಮಾಡಿಸಿ ಕುಟುಂಬಸ್ಥರನ್ನು ಮನೆಯೊಳಗೆ ಸೇರಿಸಿದರು. ಕುಟುಂಬಸ್ಥರು ಕೇವಲ ಸಾಲದ ಅಸಲನ್ನಷ್ಟೆ ತುಂಬಲಿದ್ದು, ಅದಕ್ಕೂ ಕಾಲಾವಕಾಶ ನೀಡಬೇಕು ಎನ್ನುವ ತಾಕೀತನ್ನು ಸಚಿವರು ಮಾಡಿದ್ದಾರೆ.
ತಾವು ಆಸ್ಪತ್ರೆಯಲ್ಲಿದ್ದರೂ, ತುರ್ತಾಗಿ ಸ್ಪಂದಿಸಿ, ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರ್ಯಕ್ರಮ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿ ಧನ್ಯವಾದ ಸಲ್ಲಿಸಿದರು.
ಗ್ರಾಮಪಂಚಾಯಿತಿ ಅಧ್ಯಕ್ಷ ನಾಮದೇವ ಜೋಗಣ್ಣವರ್, ಲಕ್ಷ್ಮೀ ಹೆಬ್ಬಾಳಕರ್ ಅವರ ಮುಖಂಡರಾದ ಲಕ್ಷ್ಮಣ ಮುಚ್ಚಂಡಿ, ರಮೇಶ ಜಳಕಣ್ಣವರ್, ಸ್ವಪ್ನಿಲ್ ಜಾಧವ, ಕೃಷ್ಣಾ ಪಾಟೀಲ, ಸಚಿವರ ಆಪ್ತ ಸಹಾಯಕ ಮಹಂತೇಶ ಹಿರೇಮಠ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು