6:31 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮನೆ ಸೀಝ್ ಮಾಡಿ ಬಾಣಂತಿ- ಮಗುವನ್ನು ಹೊರಹಾಕಿದ ಖಾಸಗಿ ಫೈನಾನ್ಸ್: ಬೀಗ ತೆರವುಗೊಳಿಸಿದ ಸಚಿವೆ ಹೆಬ್ಬಾಳ್ಕರ್

24/01/2025, 21:49

ಬೆಳಗಾವಿ(reporterkarnataka.com):ಸಾಲ ಮರುಪಾವತಿಸಿಲ್ಲ ಎನ್ನುವ ಕಾರಣಕ್ಕೆ ಬಾಣಂತಿ ಸೇರಿದಂತೆ ಕುಟುಂಬದವರನ್ನೆಲ್ಲ ಹೊರ ಹಾಕಿ ಬೀಗ ಹಾಕಲಾಗಿದ್ದ ಪ್ರಕರಣಕ್ಕೆ ತ್ವರಿತವಾಗಿ ಸ್ಪಂದಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮನೆಯ ಬೀಗ ತೆರವುಗೊಳಿಸಿ ಕುಟುಂಬದವರನ್ನು ಮನೆಗೆ ಸೇರಿಸಿದ್ದಾರೆ.
ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಮಾಧುರಿ ಲೋಹಾರ್ ಎನ್ನುವ ಬಾಣಂತಿ ಮತ್ತು ಅವರ ಕುಟುಂಬದವರು ಸಾಲ ತೀರಿಸಿಲ್ಲ ಎಂದು ಆರೋಪಿಸಿ ಖಾಸಗಿ ಹಣಕಾಸು ಸಂಸ್ಥೆಯವರು ಹಸಿ ಬಾಣಂತಿ ಸೇರಿದಂತೆ ಕುಟುಂಬಸ್ಥರನ್ನು ಮನೆಯಿಂದ ಹೊರಹಾಕಿ ಸೀಜ್ ಮಾಡಿದ್ದರು.
ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಸುದ್ದಿ ತಿಳಿದ ತಕ್ಷಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ತಮ್ಮ ಆಪ್ತ ಸಹಾಯಕರನ್ನು ಸ್ಥಳಕ್ಕೆ ಕಳಿಸಿ ಕುಟುಂಬಕ್ಕೆ ಆಹಾರ, ಧಾನ್ಯಗಳನ್ನು ಮತ್ತು ಸ್ವಲ್ಪಮಟ್ಟಿಗೆ ಆರ್ಥಿಕ ನೆರವನ್ನು ಒದಗಿಸಿದರು.
ನಂತರ ಹಣಕಾಸು ಸಂಸ್ಥೆಯ ಪ್ರತಿನಿಧಿಗಳ ಜೊತೆ ಮಾತನಾಡಿ, ಸಾಲ ಮರುಪಾವತಿಸಲು ಸಮಯಾವಕಾಶ ಕೊಡಿಸಿದ್ದಲ್ಲದೆ, ಮನೆಯ ಬೀಗ ತೆರವು ಮಾಡಿಸಿ ಕುಟುಂಬಸ್ಥರನ್ನು ಮನೆಯೊಳಗೆ ಸೇರಿಸಿದರು. ಕುಟುಂಬಸ್ಥರು ಕೇವಲ ಸಾಲದ ಅಸಲನ್ನಷ್ಟೆ ತುಂಬಲಿದ್ದು, ಅದಕ್ಕೂ ಕಾಲಾವಕಾಶ ನೀಡಬೇಕು ಎನ್ನುವ ತಾಕೀತನ್ನು ಸಚಿವರು ಮಾಡಿದ್ದಾರೆ.
ತಾವು ಆಸ್ಪತ್ರೆಯಲ್ಲಿದ್ದರೂ, ತುರ್ತಾಗಿ ಸ್ಪಂದಿಸಿ, ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರ್ಯಕ್ರಮ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿ ಧನ್ಯವಾದ ಸಲ್ಲಿಸಿದರು.
ಗ್ರಾಮಪಂಚಾಯಿತಿ ಅಧ್ಯಕ್ಷ ನಾಮದೇವ ಜೋಗಣ್ಣವರ್, ಲಕ್ಷ್ಮೀ ಹೆಬ್ಬಾಳಕರ್ ಅವರ ಮುಖಂಡರಾದ ಲಕ್ಷ್ಮಣ ಮುಚ್ಚಂಡಿ, ರಮೇಶ ಜಳಕಣ್ಣವರ್, ಸ್ವಪ್ನಿಲ್ ಜಾಧವ, ಕೃಷ್ಣಾ ಪಾಟೀಲ, ಸಚಿವರ ಆಪ್ತ ಸಹಾಯಕ ಮಹಂತೇಶ ಹಿರೇಮಠ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು