5:39 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ: ಮಾರ್ಚ್ 23ರ ವರೆಗೆ ನಿರ್ಬಂಧ

24/01/2025, 23:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನ ಹೃದಯ ಭಾಗದಲ್ಲಿ ಪ್ರತಿಭಟನೆ, ಧರಣಿಗೆ ಅವಕಾಶ ನಿರಾಕರಿಸಲಾಗಿದೆ. ಪ್ರತಿಭಟನೆ, ಧರಣಿ, ರಸ್ತೆ ತಡೆ ನಡೆಸಿದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ
ಆದೇಶ ಹೊರಡಿಸಿದ್ದಾರೆ.
ದಿಢೀರ್ ಪ್ರತಿಭಟನೆ, ಧರಣಿ, ಮುಷ್ಕರ, ‌ರಸ್ತೆ ತಡೆಯಿಂದ‌ ಜಿಲ್ಲಾಡಳಿತ ಹೈರಾಣು ಆಗಿರುವ ಹಿನ್ನೆಲೆಯಲ್ಲಿ
ಕಾನೂನು ಸುವ್ಯವಸ್ಥೆ ಪಾಲನೆಗೆ ಪ್ರತಿಭಟನೆ , ಮುಷ್ಕರ, ರಸ್ತೆ ತಡೆಗೆ ಬ್ರೇಕ್ ಹಾಕಲಾಗಿದೆ. ನಗರದ ಹೃದಯ ಭಾಗವಾದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ ಹೊರಡಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿ, ಬಡಾಮಖಾನ್ ದರ್ಗಾ‌ ಕೂಡ ಇರುವುರಿಂದ ಕಾನೂನು ಸೂಕ್ಷ್ಮತೆಯಿಂದ ನಿರ್ಬಂಧದ ಆದೇಶ ನೀಡಲಾಗಿದೆ.
ರಾಜಕೀಯ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆ ಕೈಗೊಳ್ಳುವುದು ಕಷ್ಟಕರ ಎಂದು ಉಲ್ಲೇಖಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ 100 ಮೀಟರ್ ಯಾವುದೇ ಪ್ರತಿಭಟನೆ, ಧರಣಿ ನಡೆಸಿದಂತೆ ನಿರ್ಬಂಧಿಸಲಾಗಿದೆ. ಮಾರ್ಚ್ 23ರ ವರೆಗೂ ನಿರ್ಬಂಧ ವಿಧಿಸಿ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು