10:26 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸಕ್ಕೆ ಸುತ್ತೂರು ಶ್ರೀಗಳು ಚಾಲನೆ; ಮಹಾ ದಾಸೋಹಕ್ಕೆ ಕ್ಷಣಗಣನೆ

25/01/2025, 15:56

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜನವರಿ 26ರಿಂದ 31ರವರೆಗೆ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳು ಚಾಲನೆ ನೀಡಿದರು.
ಬೃಹತ್ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸಿ ದೊಡ್ಡ ದೊಡ್ಡ ಪಾತ್ರೆಗಳಿಗೆ ಅಡುಗೆ ಪದಾರ್ಥ ಹಾಕುವ ಮೂಲಕ ಚಾಲನೆ ನೀಡಲಾಯಿತು.
ಇಂದು ದೊಡ್ಡ ದೊಡ್ಡ ಅಡುಗೆ ಒಲೆಗಳಿಗೆ ಹಚ್ಚುವ ಬೆಂಕಿ ಒಂದು ವಾರಗಳ ಕಾಲ ಆರದೇ ಇರುವುದು ತ್ರಿಕಾಲ ಮಹಾ ದಾಸೋಹದ ವಿಶೇಷ.


ಸುತ್ತೂರು ಜಾತ್ರೆ ಮಹಾ ದಾಸೋಹಕ್ಕೆ 1 ಸಾವಿರ ಕ್ವಿಂಟಾಲ್ ಅಕ್ಕಿ, 250 ಕ್ವಿಂಟಾಲ್ ಬೇಳೆ, 200 ಕ್ವಿಂಟಾಲ್ ಸಕ್ಕರೆ, 1500 ಸಾವಿರ ಟಿನ್ ಅಡುಗೆ ಎಣ್ಣೆ 10 ಸಾವಿರ ಕೆಜಿ ತುಪ್ಪ, ಸಾವಿರಾರು ಕ್ವಿಂಟಲ್ ತರಕಾರಿ ಸೇರಿದಂತೆ ಅಡುಗೆ ಸಾಮಾಗ್ರಿ ದಾಸ್ತಾನು ಮಾಡಿಕೊಳ್ಳಲಾಗಿದೆ.
ಇದರಿಂದಾಗಿ ಪ್ರತಿನಿತ್ಯ ಬಗೆ ಬಗೆಯ ಸಿಹಿಯು ಸೇರಿದಂತೆ ಲಕ್ಷಾಂತರ ಮಂದಿಗೆ ತ್ರಿಕಾಲ ದಾಸೋಹ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು, ಮಠದ ಕಾರ್ಯದರ್ಶಿಗಳಾದ ಮಂಜುನಾಥ ಸ್ವಾಮಿ, ಉದಯಕುಮಾರ್, ಶಿವಕುಮಾರ್, ಮಹಾ ದಾಸೋಹ ವ್ಯವಸ್ಥಾಪಕರಾದ ಸುಬ್ಬಪ್ಪ, ಸೇರಿದಂತೆ ಹಲವು ಮಠಾಧೀಶರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು