9:42 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್‌ ಅಪಹರಣ; 6 ಕೋಟಿ ರೂ. ಹಣದ ಬೇಡಿಕೆ 

25/01/2025, 15:58

ಬಳ್ಳಾರಿ(reporterkarnataka.com): ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್‌ ಅವರನ್ನು ದುಷ್ಕರ್ಮಿಗಳು ಶನಿವಾರ ಮುಂಜಾನೆ 6 ಗಂಟೆ ವೇಳೆಗೆ ಅಪಹರಿಸಿದ್ದು, ಭಾರೀ ಹಣದ ಬೇಡಿಕೆ ಇಟ್ಟಿದ್ದಾರೆ.
ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ. ಸುನೀಲ್‌ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 6 ಕೋಟಿ ರೂ. ನಗದು ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಗೊತ್ತಾಗಿದೆ. 
ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. 
ಬಳ್ಳಾರಿ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ಜಿಲ್ಲೆಯ ಪ್ರಮುಖ ಪೊಲೀಸ್‌ ಅಧಿಕಾರಿಗಳನ್ನು ತನಿಖೆಯಲ್ಲಿ ತೊಡಿಗಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ. 
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸ್ಥಳ ಪರಿಶೀಲನೆ ನಡೆಸಿದ್ದು, ತನಿಖಾ ತಂಡಕ್ಕೆ ಸಲಹೆ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು