11:37 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ದಂಧೆ ನಿಲ್ಲಿಸಿ: ಪೊಲೀಸ್ ಕಮಿಷನರ್ ಗೆ ಶಾಸಕ ಕಾಮತ್ ಆಗ್ರಹ

25/01/2025, 20:20

ಮಂಗಳೂರು(reporterkarnataka.com):ನಗರದಾದ್ಯಂತ ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ, ಅನೈತಿಕ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ‌ಅವರು ನಗರ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜಿಲ್ಲೆಯಲ್ಲಿ ಅನೈತಿಕ ಚಟುವಟಿಕೆಗಳು ಯಾವುದೇ ಭಯವಿಲ್ಲದೇ ನಡೆಯಲಾರಂಭಿಸಿವೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಮಂಗಳೂರು ರವರು ನನ್ನ ಸಹಿತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೂ ಮನವಿ ಸಲ್ಲಿಸಿದ್ದು ಅವರ ಕಾಳಜಿಗೆ ನನ್ನ ಸಂಪೂರ್ಣ ಸಹಕಾರವಿದೆ. ನಿಯಮಬದ್ಧವಾಗಿ ನಡೆಯುವ ಯುನಿಸೆಕ್ಸ್ ಸಲೂನ್ ಗಳಿಗೆ ಯಾರದ್ದೂ ಅಭ್ಯಂತರವಿಲ್ಲ. ಆದರೆ ಯುನಿಸೆಕ್ಸ್ ಸೆಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ, ಅನೈತಿಕ ದಂಧೆಗಳಿಗೆ ಎಲ್ಲರ ವಿರೋಧವಿದ್ದು ಇಂತಹವುಗಳ ಪರವಾನಿಗೆಯನ್ನೇ ರದ್ದುಗೊಳಿಸಬೇಕು ಎಂದರು.
ಅಪ್ರಾಪ್ತ ವಯಸ್ಸಿನ ಮಕ್ಕಳು ಸಹ ಈ ದಂಧೆಯ ಬಲಿಪಶುಗಳಾಗುತ್ತಿರುವುದು ಗಂಭೀರ ಸ್ವರೂಪದ್ದಾಗಿದ್ದು ಇನ್ನೂ ಸಹ ನಿರ್ಲಕ್ಷ್ಯ ವಹಿಸಿ ಮತ್ತೇನಾದರೂ ಅಹಿತಕರ ಘಟನೆಗಳು ನಡೆದರೆ ಅದರ ನೇರ ಹೊಣೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆಯೇ ಹೊರಬೇಕಾಗುತ್ತದೆ ಎಂದು ಶಾಸಕರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು