10:09 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಗುಲಿ ಕೃಷಿಕ ದಾರುಣ ಸಾವು

25/01/2025, 21:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪ ನಡೆದಿದೆ.
ಅಲ್ದೂರು ಸಮೀಪ ಕೂದುವಳ್ಳಿ ಗ್ರಾಮದ ಕೃಷಿಕ ಕೆ. ಎಲ್. ಹೂವೇಗೌಡ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.
ಹೂವೇಗೌಡ ಅವರು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಅಸುನಿಗಿದ್ದಾರೆ.
ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿ ಸ್ಥಳದಲ್ಲಿ ಸಾವನಪ್ಪಿದ್ದಾರೆ.
ಇತ್ತೀಚಿಗಷ್ಟೇ ಹೂವೆಗೌಡರ ಮಗ ಟ್ಯಾಕ್ಟರ್ ಅಪಘಾತದದಿಂದ ಗಂಭೀರ ಗಾಯಗಳಾಗಿದ್ದು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ತನ್ನ ಮಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿಯೇ
ತಂದೆ ವಿದ್ಯುತ್ ಸ್ಪರ್ಶದಿಂದ ಅಕಾಲಿಕವಾಗಿ ಅಸುನೀಗಿದ್ದಾರೆ.
ಮೃತರು ಮಡದಿ, ಮಗ ಸೇರಿದಂತೆ ಅಪಾರ ಬಂಧು ಬಳಗ ಕುಟುಂಬವನ್ನು ಅಗಲಿದ್ದಾರೆ.
ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು