2:55 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಗುಲಿ ಕೃಷಿಕ ದಾರುಣ ಸಾವು

25/01/2025, 21:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪ ನಡೆದಿದೆ.
ಅಲ್ದೂರು ಸಮೀಪ ಕೂದುವಳ್ಳಿ ಗ್ರಾಮದ ಕೃಷಿಕ ಕೆ. ಎಲ್. ಹೂವೇಗೌಡ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.
ಹೂವೇಗೌಡ ಅವರು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಅಸುನಿಗಿದ್ದಾರೆ.
ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿ ಸ್ಥಳದಲ್ಲಿ ಸಾವನಪ್ಪಿದ್ದಾರೆ.
ಇತ್ತೀಚಿಗಷ್ಟೇ ಹೂವೆಗೌಡರ ಮಗ ಟ್ಯಾಕ್ಟರ್ ಅಪಘಾತದದಿಂದ ಗಂಭೀರ ಗಾಯಗಳಾಗಿದ್ದು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ತನ್ನ ಮಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿಯೇ
ತಂದೆ ವಿದ್ಯುತ್ ಸ್ಪರ್ಶದಿಂದ ಅಕಾಲಿಕವಾಗಿ ಅಸುನೀಗಿದ್ದಾರೆ.
ಮೃತರು ಮಡದಿ, ಮಗ ಸೇರಿದಂತೆ ಅಪಾರ ಬಂಧು ಬಳಗ ಕುಟುಂಬವನ್ನು ಅಗಲಿದ್ದಾರೆ.
ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು