9:23 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ

25/01/2025, 21:27

ಮಂಗಳೂರು(reporter Karnataka.com); :ಸಹಕಾರ ರಂಗದ ಅದ್ವಿತೀಯ ನಾಯಕರು , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಉಪಾಧ್ಯಕ್ಷರಾಗಿ ಭಗವತಿ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ರಾಘವ ಆರ್.ಉಚ್ಚಿಲ್ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.


ಶನಿವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅಧ್ಯಕ್ಷರಾಗಿ ಎರಡನೇ ಅವಧಿಗೆ ಪುನರಾಯ್ಕೆಗೊಂಡರೆ, ರಾಘವ ಆರ್. ಉಚ್ಚಿಲ್ ಮೊದಲ ಬಾರಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣೆಯನ್ನು ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ನಡೆಸಿಕೊಟ್ಟರು.
ಜಗದೀಶ್ಚಂದ್ರ ಅಂಚನ್ ಕಳೆದ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ , 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ, ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಕಳೆದ ಹತ್ತು ವರ್ಷಗಳಿಂದ ನಿರ್ದೇಶಕರಾಗಿದ್ದು , ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
*ಡಾ.ಎಂಎನ್ ಆರ್ ಗೆ ಕೃತಜ್ಞತೆ ಸಮರ್ಪಣೆ:* ಸುಮಾರು 93 ವರ್ಷಗಳ ಇತಿಹಾಸವನ್ನು ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ನೌಕರರ ಏಕೈಕ ಸಹಕಾರಿ ಸಂಸ್ಥೆ ‘ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಇಂದು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಮುಖ್ಯ ಕಾರಣಕರ್ತರಾಗಿದ್ದಾರೆ. ಅವರ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನದಿಂದಲೇ ಸಂಘವು ಮಂಗಳೂರು ನಗರದ ಕೊಡಿಯಾಲ್ ಬೈಲ್ ನಲ್ಲಿ ಮೂರು ಅಂತಸ್ತಿನ ಸುಸಜ್ಜಿತ ಸ್ವಂತ ಕಟ್ಟಡವನ್ನು ಹೊಂದಲು ಸಾಧ್ಯವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಕೂಡ ಅವರ ಮಾರ್ಗದರ್ಶನದಲ್ಲೇ ನಡೆದು 15 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಇದೀಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಕೂಡ ಅವಿರೋಧವಾಗಿ ಆಯ್ಕೆಗೊಂಡಿದ್ದು, ಈ ಸಂದರ್ಭದಲ್ಲಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ನೂತನ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ಎಸ್.ಜಗದೀಶ್ಚಂದ್ರ ಅಂಚನ್ ಕೃತಜ್ಞತೆಯನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ. ಕಾರ್ಕಳ, ವಿಶ್ವೇಶ್ವರ ಐತಾಳ್ ಎಸ್. ಕುಂದಾಪುರ, ಜಯಪ್ರಕಾಶ್ ರೈ ಸಿ. ಪುತ್ತೂರು, ವಿಶ್ವನಾಥ್ ಕೆ.ಟಿ. ಸುಳ್ಯ, ವಿಶ್ವನಾಥ್ ಎನ್. ಅಮೀನ್ ಉಡುಪಿ, ಶಿವಾನಂದ ಪಿ. ಬಂಟ್ವಾಳ, ಗಿರಿಧರ್ ಕೆ. ಬೆಳ್ತಂಗಡಿ, ಚಂದ್ರಕಲಾ ಕೆ. ಮಂಗಳೂರು, ಗೀತಾಕ್ಷಿ ಮಂಗಳೂರು, ಕಿರಣ್ ಕುಮಾರ್ ಶೆಟ್ಟಿ ಮಂಗಳೂರು, ನಿಶಿತಾ ಜಯರಾಮ್ ಮಂಗಳೂರು, ಮೋಹನ್ ಎಸ್. ಮಂಗಳೂರು, ಪ್ರೇಮರಾಜ್ ಭಂಡಾರಿ ಮಂಗಳೂರು ಹಾಗೂ ಸಂಘದ ಮುಖ್ಯಕಾರ್ಯನಿರ್ಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು