3:42 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಜೆಪ್ಪಿನಮೊಗರು ಬಳಿಯ ಗುಜರಿ ಯಾರ್ಡ್‌ನಲ್ಲಿ ತಡರಾತ್ರಿ ಅಗ್ನಿ ಅನಾಹುತ: ಗೋಡಾನ್ ಸಂಪೂರ್ಣ ಭಸ್ಮ

27/01/2025, 13:24

ಮಂಗಳೂರು(reporterkarnataka.com): ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್‌ನಲ್ಲಿ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಗೋಡಾನ್ ಸಂಪೂರ್ಣ ಸುಟ್ಟು ಹೋಗಿದೆ.
ಜೆಪ್ಪಿನಮೊಗರು ಯೇನಪೊಯ ಶಾಲೆಯ ಸಮೀಪದ ಕುಡುಪಾಡಿಗೆ ಹೋಗುವ ರಸ್ತೆಯಲ್ಲಿರುವ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್‌ ಇದೆ. ಇಲ್ಲಿ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಗುಜರಿ ಸಂಗ್ರಹ ಗೋಡಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಶಾಸಕ ವೇದವ್ಯಾಸ ಕಾಮತ್ ಕೂಡಲೇ ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಿಸಿದ್ದಾರೆ. ಪಾಂಡೇಶ್ವರ ಅಗ್ನಿ ಶಾಮಕ ದಳದ ಸುಮಾರು 6ರಷ್ಟು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತಂದಿದೆ.


ಶಾಸಕ ವೇದವ್ಯಾಸ ಕಾಮತ್ ಜೊತೆಗೆ ಸ್ಥಳೀಯ ಕಾರ್ಪೊರೇಟರ್‌ಗಳಾದ ವೀಣಮಂಗಳ, ಭರತ್ ಕುಮಾರ್ ಎಸ್, ಶೈಲೇಶ್ ಶೆಟ್ಟಿ ‌ಬೆಂಕಿ ನಂದಿಸುವವರೆಗೆ ಸ್ಥಳದಲ್ಲಿ ಮೊಕ್ಕಂ ಹೂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು