1:33 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೋಟೆಕಾರು ದರೋಡೆ ಪ್ರಕರಣ; ಒಟ್ಟು 18.314 ಕೆಜಿ ಚಿನ್ನಾಭರಣ, 3.80 ಲಕ್ಷ ರೂ. ನಗದು ವಶ: ಪೊಲೀಸ್ ಕಮಿಷನರ್

27/01/2025, 18:53

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 18.314 ಕೆಜಿ ಚಿನ್ನಾಭರಣ ಹಾಗೂ 3.80 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.



ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಪದ್ಮನೇರಿಯ ಅಮ್ಮನ್ ಕೋವಿಲ್ ನ ಮುರುಗಂಡಿ ಥೇವರ್ (36 ), ಮುಂಬೈನ ಡೊಂಬಿವಿಲಿ ಪಶ್ಚಿಮದ ಗೋಪಿನಾಥ್ ಚೌಕ್ ನ ಯೋಸುವ ರಾಜಂದ್ರನ್ (35), ಮುಂಬೈ ಚೆಂಬೂರು ತಿಲಕನಗರದ ಕಣ್ಣನ್ ಮಣಿ (36), ಮುರುಗಂಡಿಗೆ ಆಶ್ರಯ ನೀಡಿದ್ದ ಆತನ ತಂದೆ ಎಂ.ಷಣ್ಮುಗಸುಂದರಂ ಸೇರಿ 4 ಮಂದಿಯನ್ನು ಬಂಧಿಸಿದ್ದೇವೆ ಎಂದು ಕಮಿಷನರ್ ಹೇಳಿದರು.
ಮುರುಗಂಡಿ 2024ರ ಆಗಸ್ಟ್ ನಲ್ಲಿ ಕೆ.ಸಿ.ರೋಡ್ ಗೆ ಬಂದು ಕೋಟೆಕಾರು ವ್ಯವಸಾಯ ಸೇವಾ ಸಂಘದ ಶಾಖೆಯನ್ನು ನೋಡಿ ಹೋಗಿದ್ದ. ನಂತರ ಅಕ್ಟೋಬರ್ ನಲ್ಲಿ ಅವರ ತಂಡದ ಕೆಲವರು ಮತ್ತೊಮ್ಮೆ ಕೆ.ಸಿ.ರೋಡ್ ಗೆ ಬಂದಿದ್ದರು. ಬಳಿಕ ನ.27ರಂದು ಯೊಸುವಾ ರಾಜೆಂದ್ರನ್ ಮತ್ತು ಮುರುಗಂಡಿ ಮತ್ತೆ ಕೆ.ಸಿ. ರೋಡ್ ಗೆ ಬಂದು ದರೋಡೆಗೆ ಸಂಚು ರೂಪಿಸಿದ್ದರು. ಶುಕ್ರವಾರ ಮಧ್ಯಾಹ್ನ ಸ್ಥಳದಲ್ಲಿ ಜನ ಓಡಾಟ ಕಡಿಮೆ ಇರುವುದರಿಂದ ಕೃತ್ಯಕ್ಕೆ ಆ ದಿನವನ್ನೇ ಆಯ್ಕೆ ಮಾಡಿದ್ದರು ಎಂದು ತಿಳಿಸಿದರು
ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಕೃತ್ಯಕ್ಕೆ ಬಳಸಿದ ಕಾರು ಮುಂಬೈ ನೋಂದಣಿ ಹೊಂದಿರುವುದು ತಿಳಿಯಿತು. ಈ ಮಾಹಿತಿ ಆಧಾರದಲ್ಲಿ ಮುಂಬೈಗೆ ನಮ್ಮ ಪೊಲೀಸರ ತಂಡ ತೆರಳಿತ್ತು. ಅಷ್ಟರಲ್ಲಿ ಅರೋಪಿಗಳು ತಮಿಳುನಾಡಿಗೆ ಪರಾರಿಯಾಗಿದ್ದರು. ನಂತರ ಪೊಲೀಸರು ತಮಿಳುನಾಡಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನವನ್ನು ತಮಿಳುನಾಡಿನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು