9:11 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕೋಟೆಕಾರು ದರೋಡೆ ಪ್ರಕರಣ; ಒಟ್ಟು 18.314 ಕೆಜಿ ಚಿನ್ನಾಭರಣ, 3.80 ಲಕ್ಷ ರೂ. ನಗದು ವಶ: ಪೊಲೀಸ್ ಕಮಿಷನರ್

27/01/2025, 18:53

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 18.314 ಕೆಜಿ ಚಿನ್ನಾಭರಣ ಹಾಗೂ 3.80 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.



ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಪದ್ಮನೇರಿಯ ಅಮ್ಮನ್ ಕೋವಿಲ್ ನ ಮುರುಗಂಡಿ ಥೇವರ್ (36 ), ಮುಂಬೈನ ಡೊಂಬಿವಿಲಿ ಪಶ್ಚಿಮದ ಗೋಪಿನಾಥ್ ಚೌಕ್ ನ ಯೋಸುವ ರಾಜಂದ್ರನ್ (35), ಮುಂಬೈ ಚೆಂಬೂರು ತಿಲಕನಗರದ ಕಣ್ಣನ್ ಮಣಿ (36), ಮುರುಗಂಡಿಗೆ ಆಶ್ರಯ ನೀಡಿದ್ದ ಆತನ ತಂದೆ ಎಂ.ಷಣ್ಮುಗಸುಂದರಂ ಸೇರಿ 4 ಮಂದಿಯನ್ನು ಬಂಧಿಸಿದ್ದೇವೆ ಎಂದು ಕಮಿಷನರ್ ಹೇಳಿದರು.
ಮುರುಗಂಡಿ 2024ರ ಆಗಸ್ಟ್ ನಲ್ಲಿ ಕೆ.ಸಿ.ರೋಡ್ ಗೆ ಬಂದು ಕೋಟೆಕಾರು ವ್ಯವಸಾಯ ಸೇವಾ ಸಂಘದ ಶಾಖೆಯನ್ನು ನೋಡಿ ಹೋಗಿದ್ದ. ನಂತರ ಅಕ್ಟೋಬರ್ ನಲ್ಲಿ ಅವರ ತಂಡದ ಕೆಲವರು ಮತ್ತೊಮ್ಮೆ ಕೆ.ಸಿ.ರೋಡ್ ಗೆ ಬಂದಿದ್ದರು. ಬಳಿಕ ನ.27ರಂದು ಯೊಸುವಾ ರಾಜೆಂದ್ರನ್ ಮತ್ತು ಮುರುಗಂಡಿ ಮತ್ತೆ ಕೆ.ಸಿ. ರೋಡ್ ಗೆ ಬಂದು ದರೋಡೆಗೆ ಸಂಚು ರೂಪಿಸಿದ್ದರು. ಶುಕ್ರವಾರ ಮಧ್ಯಾಹ್ನ ಸ್ಥಳದಲ್ಲಿ ಜನ ಓಡಾಟ ಕಡಿಮೆ ಇರುವುದರಿಂದ ಕೃತ್ಯಕ್ಕೆ ಆ ದಿನವನ್ನೇ ಆಯ್ಕೆ ಮಾಡಿದ್ದರು ಎಂದು ತಿಳಿಸಿದರು
ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಕೃತ್ಯಕ್ಕೆ ಬಳಸಿದ ಕಾರು ಮುಂಬೈ ನೋಂದಣಿ ಹೊಂದಿರುವುದು ತಿಳಿಯಿತು. ಈ ಮಾಹಿತಿ ಆಧಾರದಲ್ಲಿ ಮುಂಬೈಗೆ ನಮ್ಮ ಪೊಲೀಸರ ತಂಡ ತೆರಳಿತ್ತು. ಅಷ್ಟರಲ್ಲಿ ಅರೋಪಿಗಳು ತಮಿಳುನಾಡಿಗೆ ಪರಾರಿಯಾಗಿದ್ದರು. ನಂತರ ಪೊಲೀಸರು ತಮಿಳುನಾಡಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನವನ್ನು ತಮಿಳುನಾಡಿನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು