8:56 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕೋಟೆಕಾರು ದರೋಡೆ ಪ್ರಕರಣ; ಒಟ್ಟು 18.314 ಕೆಜಿ ಚಿನ್ನಾಭರಣ, 3.80 ಲಕ್ಷ ರೂ. ನಗದು ವಶ: ಪೊಲೀಸ್ ಕಮಿಷನರ್

27/01/2025, 18:53

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 18.314 ಕೆಜಿ ಚಿನ್ನಾಭರಣ ಹಾಗೂ 3.80 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.



ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಪದ್ಮನೇರಿಯ ಅಮ್ಮನ್ ಕೋವಿಲ್ ನ ಮುರುಗಂಡಿ ಥೇವರ್ (36 ), ಮುಂಬೈನ ಡೊಂಬಿವಿಲಿ ಪಶ್ಚಿಮದ ಗೋಪಿನಾಥ್ ಚೌಕ್ ನ ಯೋಸುವ ರಾಜಂದ್ರನ್ (35), ಮುಂಬೈ ಚೆಂಬೂರು ತಿಲಕನಗರದ ಕಣ್ಣನ್ ಮಣಿ (36), ಮುರುಗಂಡಿಗೆ ಆಶ್ರಯ ನೀಡಿದ್ದ ಆತನ ತಂದೆ ಎಂ.ಷಣ್ಮುಗಸುಂದರಂ ಸೇರಿ 4 ಮಂದಿಯನ್ನು ಬಂಧಿಸಿದ್ದೇವೆ ಎಂದು ಕಮಿಷನರ್ ಹೇಳಿದರು.
ಮುರುಗಂಡಿ 2024ರ ಆಗಸ್ಟ್ ನಲ್ಲಿ ಕೆ.ಸಿ.ರೋಡ್ ಗೆ ಬಂದು ಕೋಟೆಕಾರು ವ್ಯವಸಾಯ ಸೇವಾ ಸಂಘದ ಶಾಖೆಯನ್ನು ನೋಡಿ ಹೋಗಿದ್ದ. ನಂತರ ಅಕ್ಟೋಬರ್ ನಲ್ಲಿ ಅವರ ತಂಡದ ಕೆಲವರು ಮತ್ತೊಮ್ಮೆ ಕೆ.ಸಿ.ರೋಡ್ ಗೆ ಬಂದಿದ್ದರು. ಬಳಿಕ ನ.27ರಂದು ಯೊಸುವಾ ರಾಜೆಂದ್ರನ್ ಮತ್ತು ಮುರುಗಂಡಿ ಮತ್ತೆ ಕೆ.ಸಿ. ರೋಡ್ ಗೆ ಬಂದು ದರೋಡೆಗೆ ಸಂಚು ರೂಪಿಸಿದ್ದರು. ಶುಕ್ರವಾರ ಮಧ್ಯಾಹ್ನ ಸ್ಥಳದಲ್ಲಿ ಜನ ಓಡಾಟ ಕಡಿಮೆ ಇರುವುದರಿಂದ ಕೃತ್ಯಕ್ಕೆ ಆ ದಿನವನ್ನೇ ಆಯ್ಕೆ ಮಾಡಿದ್ದರು ಎಂದು ತಿಳಿಸಿದರು
ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಕೃತ್ಯಕ್ಕೆ ಬಳಸಿದ ಕಾರು ಮುಂಬೈ ನೋಂದಣಿ ಹೊಂದಿರುವುದು ತಿಳಿಯಿತು. ಈ ಮಾಹಿತಿ ಆಧಾರದಲ್ಲಿ ಮುಂಬೈಗೆ ನಮ್ಮ ಪೊಲೀಸರ ತಂಡ ತೆರಳಿತ್ತು. ಅಷ್ಟರಲ್ಲಿ ಅರೋಪಿಗಳು ತಮಿಳುನಾಡಿಗೆ ಪರಾರಿಯಾಗಿದ್ದರು. ನಂತರ ಪೊಲೀಸರು ತಮಿಳುನಾಡಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನವನ್ನು ತಮಿಳುನಾಡಿನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು