9:04 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ಕಾಡ್ಗಿಚ್ಚು ತಡೆಯಲು ಅರಣ್ಯ ಇಲಾಖೆಯಿಂದ ಕೊನೆಗೂ ಸಿಬ್ಬಂದಿಗಳ ನಿಯೋಜನೆ

27/01/2025, 22:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಡ್ಗಿಚ್ಚು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಕೊನೆಗೂ ನಿಯೋಜನೆ ಮಾಡಿದೆ.
ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಡ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ.
ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಡ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು.
ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ. ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು