1:52 PM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಸುತ್ತೂರು ಜಾತ್ರಾ ಮಹೋತ್ಸವದ 2ನೇ ದಿ‌ನ ಬೃಹತ್ ಸಾಮೂಹಿಕ ವಿವಾಹ: 155 ಜೋಡಿಗಳಿಗೆ ಕಂಕಣಭಾಗ್ಯ

27/01/2025, 23:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸುತ್ತೂರು ಜಾತ್ರಾ ಮಹೋತ್ಸವದ ಎರಡನೇ ದಿ‌ನವಾದ ಇಂದು ಬೃಹತ್ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.
ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವ ಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಅಂತರ್ಜಾತಿಗಳ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಪಾಲ್ಗೊಂಡರು.


ಇಂದು ನಡೆದ ಸಾಮೂಹಿಕ ವಿವಾಹದಲ್ಲಿ ವೀರಶೈವ ಲಿಂಗಾಯತ ಸಮುದಾಯದ 3 ಜೋಡಿ, ಪರಿಶಿಷ್ಟ ಜಾತಿಯ 84 ಜೋಡಿ, ಪರಿಶಿಷ್ಟ ಪಂಗಡದ 22 ಜೋಡಿ, ಹಿಂದುಳಿದ ವರ್ಗದ 22 ಜೋಡಿ, ಅಂತರಜಾತಿಯ 23 ಜೋಡಿ, ಅಂತರಧರ್ಮದ 1 ಒಂದು ಜೋಡಿ ಸೇರಿದಂತೆ ಒಟ್ಟು 155 ಜೋಡಿ ಸತಿ-ಪತಿಗಳಾಗುವ ಮೂಲಕ ದಾಂಪತ್ಯ ಜೀವನ ಪ್ರವೇಶಿಸಿದವು. ಈ ಪೈಕಿ 3 ವಿಶೇಷ ಚೇತನರ ಜೋಡಿಗಳಿದ್ದರೆ, ಒಂದು ಜೋಡಿ ಮರು ಮದುವೆಯಾಗಿದೆ. ಒಟ್ಟು 155 ಜೋಡಿಗಳಲ್ಲಿ ಮೈಸೂರು ಜಿಲ್ಲೆಗೆ ಸೇರಿದ 79 ಜೋಡಿಗಳಿದ್ದರೆ, ಚಾಮರಾಜನಗರ ಜಿಲ್ಲೆಯ 43 ಜೋಡಿ, ಮಂಡ್ಯ ಜಿಲ್ಲೆಯ 6, ಬೆಂಗಳೂರಿನ 1, ರಾಮನಗರ ಜಿಲ್ಲೆಯ 4, ಚಿಕ್ಕಬಳ್ಳಾಪುರ ಜಿಲ್ಲೆಯ 1, ಗದಗ ಜಿಲ್ಲೆಯ 1, ಹಾವೇರಿ ಜಿಲ್ಲೆಯ 2, ಹಾಸನದ 1, ನೆರೆಯ ತಮಿಳುನಾಡಿನ ಈರೋಡ್ ಜಿಲ್ಲೆಯ 15, ಕೊಯಮತ್ತೂರಿನ 1, ನೀಲಗಿರಿಯ1 ಜೋಡಿಗಳು ಸೇರಿವೆ. ಈ ಮೊದಲೇ ವಿವಾಹಗಳ‌ ನೋಂದಾವಣಿಯಾಗಿದ್ದು, ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗು ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಷರ್ಟ್ ಗಳನ್ನು ನೀಡಲಾಯಿತು. ಸಾಮೂಹಿಕ ವಿವಾಹದಲ್ಲಿ ಮದುವೆಯಾದ ವಧು-ವರರು ವಿವಾಹದ ದೃಢೀಕರಣ ಪತ್ರ ಹಾಗೂ ನೋಂದಣಿ ಪತ್ರಗಳನ್ನು ಸಲ್ಲಿಸಿ, ಸರ್ಕಾರ ನೀಡುವ ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು