6:26 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸುತ್ತೂರು ಜಾತ್ರಾ ಮಹೋತ್ಸವದ 2ನೇ ದಿ‌ನ ಬೃಹತ್ ಸಾಮೂಹಿಕ ವಿವಾಹ: 155 ಜೋಡಿಗಳಿಗೆ ಕಂಕಣಭಾಗ್ಯ

27/01/2025, 23:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸುತ್ತೂರು ಜಾತ್ರಾ ಮಹೋತ್ಸವದ ಎರಡನೇ ದಿ‌ನವಾದ ಇಂದು ಬೃಹತ್ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.
ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವ ಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಅಂತರ್ಜಾತಿಗಳ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಪಾಲ್ಗೊಂಡರು.


ಇಂದು ನಡೆದ ಸಾಮೂಹಿಕ ವಿವಾಹದಲ್ಲಿ ವೀರಶೈವ ಲಿಂಗಾಯತ ಸಮುದಾಯದ 3 ಜೋಡಿ, ಪರಿಶಿಷ್ಟ ಜಾತಿಯ 84 ಜೋಡಿ, ಪರಿಶಿಷ್ಟ ಪಂಗಡದ 22 ಜೋಡಿ, ಹಿಂದುಳಿದ ವರ್ಗದ 22 ಜೋಡಿ, ಅಂತರಜಾತಿಯ 23 ಜೋಡಿ, ಅಂತರಧರ್ಮದ 1 ಒಂದು ಜೋಡಿ ಸೇರಿದಂತೆ ಒಟ್ಟು 155 ಜೋಡಿ ಸತಿ-ಪತಿಗಳಾಗುವ ಮೂಲಕ ದಾಂಪತ್ಯ ಜೀವನ ಪ್ರವೇಶಿಸಿದವು. ಈ ಪೈಕಿ 3 ವಿಶೇಷ ಚೇತನರ ಜೋಡಿಗಳಿದ್ದರೆ, ಒಂದು ಜೋಡಿ ಮರು ಮದುವೆಯಾಗಿದೆ. ಒಟ್ಟು 155 ಜೋಡಿಗಳಲ್ಲಿ ಮೈಸೂರು ಜಿಲ್ಲೆಗೆ ಸೇರಿದ 79 ಜೋಡಿಗಳಿದ್ದರೆ, ಚಾಮರಾಜನಗರ ಜಿಲ್ಲೆಯ 43 ಜೋಡಿ, ಮಂಡ್ಯ ಜಿಲ್ಲೆಯ 6, ಬೆಂಗಳೂರಿನ 1, ರಾಮನಗರ ಜಿಲ್ಲೆಯ 4, ಚಿಕ್ಕಬಳ್ಳಾಪುರ ಜಿಲ್ಲೆಯ 1, ಗದಗ ಜಿಲ್ಲೆಯ 1, ಹಾವೇರಿ ಜಿಲ್ಲೆಯ 2, ಹಾಸನದ 1, ನೆರೆಯ ತಮಿಳುನಾಡಿನ ಈರೋಡ್ ಜಿಲ್ಲೆಯ 15, ಕೊಯಮತ್ತೂರಿನ 1, ನೀಲಗಿರಿಯ1 ಜೋಡಿಗಳು ಸೇರಿವೆ. ಈ ಮೊದಲೇ ವಿವಾಹಗಳ‌ ನೋಂದಾವಣಿಯಾಗಿದ್ದು, ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗು ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಷರ್ಟ್ ಗಳನ್ನು ನೀಡಲಾಯಿತು. ಸಾಮೂಹಿಕ ವಿವಾಹದಲ್ಲಿ ಮದುವೆಯಾದ ವಧು-ವರರು ವಿವಾಹದ ದೃಢೀಕರಣ ಪತ್ರ ಹಾಗೂ ನೋಂದಣಿ ಪತ್ರಗಳನ್ನು ಸಲ್ಲಿಸಿ, ಸರ್ಕಾರ ನೀಡುವ ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು