12:58 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಕಾಡಿನ ಬೆಂಕಿ: ಜನಜಾಗೃತಿಗಾಗಿ ಸಂಕೇತ್ ಯುವ ತಂಡದಿಂದ ಬೀದಿ ನಾಟಕ

28/01/2025, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಸಂಕೇತ್ ಯುವ ತಂಡ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದೆ.
ಇತ್ತೀಚೆಗೆ ಅರಣ್ಯಗಳಿಗೆ ಬೆಂಕಿ ತಗುಲಿ ಗಿಡಮರಗಳು ಹಾಗೂ ಅರಣ್ಯ ಜೀವ ರಾಶಿಗಳು ನಾಶವಾಗಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಜನರಿಗೆ ಅರಣ್ಯಗಳ ಬಗ್ಗೆ ಕಾಳಜಿ ಮೂಡುವಂತೆ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ಅಭಿಯಾನ ಕೊಟ್ಟಿಗೆಹಾರ ಮತ್ತು ಬಣಕಲ್ ಪಟ್ಟಣಗಳಲ್ಲಿ ಬೀದಿ ನಾಟಕದ ಮೂಲಕ ಪರಿಸರ ಸಂರಕ್ಷಣೆಜಾಗೃತಿ ಮಾಡಲಾಯಿತು. ಆಕಸ್ಮಿಕವಾಗಿ ಅರಣ್ಯಗಳಿಗೆ ಬೆಂಕಿ ಹೊತ್ತಿಕೊಂಡರೆ ತಕ್ಷಣ ಬೆಂಕಿ ನಂದಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕುರಿತು ಬೀದಿ ನಾಟಕದ ಮೂಲಕ ಸಹ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮ ದಲ್ಲಿ ಅರಣ್ಯ ಗಸ್ತು ಪಾಲಕರಾದ ಅಭಿಜಿತ್, ಸುರೇಶ್, ಶಂಕ್ರಪ್ಪ ಹಾಗೂ ಸಂಕೇತ್ ಯುವ ತಂಡ ಚಿಕ್ಕಮಗಳೂರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು