1:41 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾಡಿನ ಬೆಂಕಿ: ಜನಜಾಗೃತಿಗಾಗಿ ಸಂಕೇತ್ ಯುವ ತಂಡದಿಂದ ಬೀದಿ ನಾಟಕ

28/01/2025, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಸಂಕೇತ್ ಯುವ ತಂಡ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದೆ.
ಇತ್ತೀಚೆಗೆ ಅರಣ್ಯಗಳಿಗೆ ಬೆಂಕಿ ತಗುಲಿ ಗಿಡಮರಗಳು ಹಾಗೂ ಅರಣ್ಯ ಜೀವ ರಾಶಿಗಳು ನಾಶವಾಗಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಜನರಿಗೆ ಅರಣ್ಯಗಳ ಬಗ್ಗೆ ಕಾಳಜಿ ಮೂಡುವಂತೆ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ಅಭಿಯಾನ ಕೊಟ್ಟಿಗೆಹಾರ ಮತ್ತು ಬಣಕಲ್ ಪಟ್ಟಣಗಳಲ್ಲಿ ಬೀದಿ ನಾಟಕದ ಮೂಲಕ ಪರಿಸರ ಸಂರಕ್ಷಣೆಜಾಗೃತಿ ಮಾಡಲಾಯಿತು. ಆಕಸ್ಮಿಕವಾಗಿ ಅರಣ್ಯಗಳಿಗೆ ಬೆಂಕಿ ಹೊತ್ತಿಕೊಂಡರೆ ತಕ್ಷಣ ಬೆಂಕಿ ನಂದಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕುರಿತು ಬೀದಿ ನಾಟಕದ ಮೂಲಕ ಸಹ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮ ದಲ್ಲಿ ಅರಣ್ಯ ಗಸ್ತು ಪಾಲಕರಾದ ಅಭಿಜಿತ್, ಸುರೇಶ್, ಶಂಕ್ರಪ್ಪ ಹಾಗೂ ಸಂಕೇತ್ ಯುವ ತಂಡ ಚಿಕ್ಕಮಗಳೂರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು