7:54 PM Thursday19 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರದ್ಧಾಭಕ್ತಿಯಿಂದ ನಡೆದ ಸುತ್ತೂರು ಜಾತ್ರಾ ರಥೋತ್ಸವ; 40 ಜಾನಪದ ತಂಡಗಳ ಮೆರುಗು

28/01/2025, 21:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ 6 ದಿನಗಳ ಕಾಲ ನಡೆಯುತ್ತಿರುವ ಅದ್ದೂರಿ ಜಾತ್ರಾ ಮಹೋತ್ಸವದ 3ನೇ ದಿನವಾದ ಇಂದು ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ರಥೋತ್ಸವ ಸಡಗರ- ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹಾಗೂ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಗದ್ದುಗೆಯಿಂದ ತಂದ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಅಲಂಕೃತ ಉತ್ಸವ ಮೂರ್ತಿಯನ್ನು ಬಣ್ಣ ಬಣ್ಣದ ಬಾವುಟ, ಬಂಟಿಂಗ್ಸ್, ಹೂ ಗಳಿಂದ ಅಲಂಕರಿಸಲಾದ ಬೃಹತ್ ರಥದಲ್ಲಿ ಕೂರಿಸಲಾಯಿತು.
ನಂತರ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವಿವಿಧ ಮಠಾಧೀಶರು ಹಾಗೂ ಗಣ್ಯರು ರಥಕ್ಕೆ ಪೂಜೆ ಸಲ್ಲಿಸಿ ಹಣ್ಣು ಜವನ ಎಸೆದು ಪುಷ್ಪಾರ್ಚನೆ ಮಾಡುವ ಮೂಲಕ ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.


ನಂದಿಧ್ವಜ, ವೀರಗಾಸೆ, ಮಂಗಳವಾದ್ಯ, ಮಹಿಳೆಯರ ಚಂಡೆ ವಾದ್ಯ, ಪೂಜಾ ಕುಣಿತ, ಡೊಳ್ಳು ಕುಣಿತ, ತಮಟೆ ವಾದ್ಯ, ಗಾರುಡಿ ಗೊಂಬೆ, ಹುಲಿ ವೇಷ ಗೊರವರ ಕುಣಿತ ಸೇರಿದಂತೆ 40ಕ್ಕೂ ಹೆಚ್ಚು ವಿವಿಧ ಜಾನಪದ ಕಲಾತಂಡಗಳು ರಥೋತ್ಸವದಲ್ಲಿ ಪಾಲ್ಗೊಂಡು ಜಾತ್ರೆಗೆ ಮೆರುಗು ತಂದವು.
ರಾಜ್ಯದ ನಾನಾ ಮೂಲೆಗಳಿಂದ ಲಕ್ಷಾಂತರ ಭಕ್ತರು ಜಾತ್ರೆ ಹಾಗೂ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀ ಅವರ ರಥಕ್ಕೆ ಹಣ್ಣು ಜವನ ಎಸೆಯುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಜಾತ್ರೆಗೆ ಬಂದ ಲಕ್ಷಾಂತರ ಭಕ್ತರಿಗೆ ಮಹಾದಾಸೋಹದ ವ್ಯವಸ್ಥೆ ಕಲ್ಪಿಸಿ ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಕೌಂಟರ್ ಗಳನ್ನು ನಿರ್ಮಿಸಿ ಭರ್ಜರಿ ಸಿಹಿ ಊಟ ನೀಡಲಾಯಿತು.
ಹತ್ತೂರ ಜಾತ್ರೆಗೆ ಸುತ್ತೂರು ಜಾತ್ರೆ ಸಮ ಎಂಬ ನಾಣ್ಣುಡಿಯಂತೆ ಸುತ್ತೂರು ಜಾತ್ರೆಗೆ ಭಕ್ತರ ಮಹಾಪೂರವೇ ಹರಿದು ಬಂದು ಎಲ್ಲಿ ನೋಡಿದರಲ್ಲಿ ಜನಸಾಗರವೇ ಎದ್ದು ಕಾಣುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು