6:51 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು