2:45 AM Saturday9 - August 2025
ಬ್ರೇಕಿಂಗ್ ನ್ಯೂಸ್
Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಮೆನು ಪ್ರಕಾರ ಊಟ- ತಿಂಡಿ ಕೊಡದ ವಾರ್ಡನ್: ಸುರಪುರ ಎಸ್ ಸಿ, ಎಸ್ಟಿ ಹಾಸ್ಟೆಲ್‌ಗೆ ಶಾಸಕರ ದಿಢೀರ್ ಭೇಟಿ

29/01/2025, 19:39

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ- ಪಂಗಡದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸ್ಟೆಲ್‌ನಲ್ಲಿರುವ ಸೌಲಭ್ಯಗಳ ಕುರಿತು ವಾರ್ಡ್‌ನ್‌ ಅವರಿಂದ ಮಾಹಿತಿ ಪಡೆದ ಅವರು, ಉಗ್ರಾಣಕ್ಕೆ ಹೋಗಿ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಹಾಸ್ಟೆಲ್ ಆವರಣ, ಕೊಠಡಿಗಳು, ಶೌಚಾಲಯ ಹಾಗೂ ಅಡುಗೆ ಕೋಣೆಗಳ ಸ್ವಚ್ಛತೆಯನ್ನು ವೀಕ್ಷಿಸಿದರು.
*ಮೆನು ಪ್ರಕಾರ ತಿಂಡಿ, ಊಟ ಕೊಡುವುದಿಲ್ಲ:*
ವಾರ್ಡ್‌ನ್‌ ನಮ್ಮನ್ನು ಗದರಿಸುತ್ತಾರೆ. ಬೆದರಿಕೆಯಿಂದ ನಮ್ಮನ್ನು ಇಟ್ಟಿದ್ದಾರೆ. ಹಾಲಿಗೆ ಹೆಚ್ಚು ನೀರು ಬೆರೆಸಿಕೊಡುತ್ತಾರೆ, ನೋಡಿ ಸರ್ ಎಂದು ವಿದ್ಯಾರ್ಥಿಗಳು ಹಾಲಿನ ಲೋಟ ತಂದು ತೋರಿಸಿದ್ದರು. ಹಾಗೆಯೇ ಮಧ್ಯಾಹ್ನದ ಚಪಾತಿಯನ್ನು ರಾತ್ರಿ ಕೊಡುತ್ತಾರೆ. ಮೆನು ಪ್ರಕಾರ ತಿಂಡಿ, ಊಟ ಕೊಡುವುದಿಲ್ಲ ಎಂದು ಸೇರಿದಂತೆ ಹಲವು ಸಮಸ್ಯೆಗಳನ್ನು ಅಲವತ್ತುಕೊಂಡರು.
*ಹಾಸ್ಟೆಲ್ ವಾರ್ಡನ್ ಗೆ ಶಾಸಕರ ಕ್ಲಾಸ್..:!*
ವಾರ್ಡನ್ (ಮೇಲ್ವಿಚಾರಿ) ಮಕ್ಕಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಸಮಯ ಪರಿಪಾಲನೆ ಮಾಡಲ್ಲ, ಸರಿಯಾದ ಬಾಳೆಹಣ್ಣು ವಿತರಣೆ ಮಾಡುವುದಿಲ್ಲ ಎಂದು ಮಕ್ಕಳಿಂದ ದೂರು ಬಂದ ಹಿನ್ನೆಲೆ ಇಂದು ಮಾನ್ಯ ಶಾಸಕರು ಶಾಲೆಗೆ ದಿಢೀರ್ ಭೇಟಿ ನೀಡಿ ವಾರ್ಡನ್ ರವರಿಗೆ ಎಚ್ಚರಿಕೆ ನೀಡಿದರು. ಮಕ್ಕಳ ಜೊತೆ ಸೌಜನ್ಯ ರೀತಿ ವರ್ತಿಸಬೇಕೆಂದು ಹೇಳಿದರು.
ಪರಿಶಿಷ್ಟ ಬಾಲಕರ ವಿದ್ಯಾರ್ಥಿ ನಿಲಯ ಆವರಣದಲ್ಲೇ ನಿಂತ ಚರಂಡಿ ನೀರು ಶಾಸಕರಿಗೆ ಆಹ್ವಾನ ನೀಡಿತು. ಹಾಸ್ಟೆಲ್ ಸುತ್ತ ಜಾಲಿ, ಕುರುಚಲು ಬೆಳೆದಿದ್ದು, ಇಂಗು ಗುಂಡಿ ಸಹ ನಿರ್ಮಿಸದೆ ಇರುವುದನ್ನು ಕಂಡ ಶಾಸಕರು, ವಾರ್ಡನ್ ನಿರ್ಲಕ್ಷದ ವಿರುದ್ಧ ಕಿಡಿಕಾರಿದರು. ಸ್ವಚ್ಛತೆಯತ್ತ ಗಮನ ಹರಿಸುವಂತೆ ಸಲಹೆ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಶಾಸಕರು ಬೆಳಗಿನ ತಿಂಡಿಯನ್ನು ಸವಿದರು. ನಂತರ ಶಾಸಕರು ಮಾತನಾಡಿ ‘ಇನ್ನು ಮುಂದೆ ಹೆದರಬೇಡಿ, ನಿಮಗೆ ಮೆನು ಪ್ರಕಾರವೇ ತಿಂಡಿ, ಊಟ ಕೊಡುತ್ತಾರೆ. ಧೈರ್ಯವಾಗಿರಿ, ನಿಮಗೆ ಸಮಸ್ಯೆ ಎದುರಾದರೆ ತಕ್ಷಣ ನನಗೆ ಕರೆ ಮಾಡಿ’ ಎಂದು ಧೈರ್ಯ ತುಂಬಿ ಸಾಂತ್ವನ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು