5:56 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

29/01/2025, 19:41

ಮೈಸೂರು(reporterkarnataka.com): ಕುಂಭಮೇಳದ ಪುಣ್ಯಸ್ನಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ನವರ ಸಂಸ್ಕೃತಿಯೇ ಅಂತದ್ದು. ಅವರಿಗೆ ನಮ್ಮ ಆಚಾರ ವಿಚಾರ, ನಂಬಿಕೆಗಳು ಎಂದರೆ ಆಗಿ ಬರುವುದಿಲ್ಲ ಎಂದರು.
ಕಾಂಗ್ರೆಸ್ ನವರಿಗೆ ಟೀಕೆ ಮಾಡುವುದೇ ಕೆಲಸ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಮಾಡಿರುವ ಟೀಕೆ, ಪದ ಬಳಕೆ ಸರಿಯಿಲ್ಲ. ಕಾಂಗ್ರೆಸ್ ಗೆ ನಮ್ಮ ಧಾರ್ಮಿಕ ಆಚರಣೆಗಳ ಮೇಲೆ ನಂಬಿಕೆ ಇಲ್ಲ. ಅದಕ್ಕೆ ಈ ರೀತಿ ಮಾತನಾಡುತ್ತಾರೆ ಎಂದು
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಕುಮಾರಸ್ವಾಮಿ ಅವರು ಖಂಡಿಸಿದರು.
ಕಾಂಗ್ರೆಸ್ ನವರು ಬೆಳಗಾವಿಯಲ್ಲಿ ಜೈ ಬಾಪು, ಜೈ ಅಂಬೇಡ್ಕರ್, ಜೈ ಸಂವಿಧಾನ್ ಎಂದು ಕಾರ್ಯಕ್ರಮ ಮಾಡಿದರು. ಗಾಂಧೀಜಿಯವರ ಹೆಸರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿದರು. ಆದರೂ ಈಗ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಗಾಂಧೀಜಿ ಅವರ ಮೇಲೆ ಕಾಂಗ್ರೆಸಿಗರಿಗೆ ನಂಬಿಕೆ ಇದ್ದಿದ್ದರೆ ಇಂತಹ ಮಾತುಗಳು ಬರುತ್ತಿರಲಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.
ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎನ್. ಮಂಜೇಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಡಾ.ಅನ್ನದಾನಿ, ಮಾಜಿ ಮೇಯರ್ ರವಿಕುಮಾರ್ ಮುಂತಾದವರು ಸಚಿವರ ಜತೆಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು