1:30 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಪ್ರಯಾಗ್ ರಾಜ್ ದುರಂತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಂಬನಿ: ಬೆಳಗಾವಿ ಯಾತ್ರಿಗಳ ಸಾವಿಗೆ ಸಚಿವರ ಸಂತಾಪ

29/01/2025, 20:59

ಬೆಳಗಾವಿ(reporterkarnataka.com): ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ.
ದುರಂತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ರಾಜ್ಯದ ಇನ್ನು ಕೆಲವು ಜನ ಗಾಯಗೊಂಡಿರುವ ಮಾಹಿತಿಯಿದ್ದು, ಎಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ರಾಜ್ಯ ಸರ್ಕಾರ ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು