11:32 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಶಾಸಕರ ಆಪ್ತನಿಂದ ಶಾಲಾ ಮೈದಾನದಲ್ಲೇ ರಸ್ತೆ ನಿರ್ಮಿಸಲು ಯತ್ನ!: ಜೆಸಿಬಿಗೆ ಅಡ್ಡ ನಿಂತು ಶಾಲಾ ಮಕ್ಕಳ- ಪೋಷಕರ ಪ್ರತಿಭಟನೆ

31/01/2025, 15:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಸ್ಥಳೀಯ ಶಾಸಕರ ಆಪ್ತನ ಮನೆಯ ಗೃಹಪ್ರವೇಶಕ್ಕಾಗಿ ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಿಸಲು ಮುಂದಾದ ಕ್ರಮವನ್ನು ವಿರೋಧಿಸಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಜೇಸಿಬಿಗೆ ಅಡ್ಡ ನಿಂತು ಪ್ರತಿಭಟಿಸಿದ ಘಟನೆ ಕಡೂರು ತಾಲೂಕಿನ ಚೌಳಹಿರಿಯೂರು ಸಮೀಪದ ಹಡಗಲು ಗ್ರಾಮದಲ್ಲಿ ನಡೆದಿದೆ.
ಪೋಷಕರು ಮತ್ತು ಶಾಲಾ ಮಕ್ಕಳಿಂದ ಜೆಸಿಬಿಗೆ ಅಡ್ಡ ನಿಂತು ಪ್ರತಿಭಟನೆ ನಡೆಸಿದರು.
ಶಾಲೆ ಒಡೆದು ಹಾಕಿ, ಗ್ರೌಂಡ್ ನಲ್ಲಿ ರಸ್ತೆ ಮಾಡಿ ಅಂತ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.


ಕಾಂಗ್ರೆಸ್ ಕಾರ್ಯಕರ್ತ ಪ್ರಮೋದ್ ಎಂಬುವರ ಮನೆ ಗೃಹಪ್ರವೇಶಕ್ಕೆ ಶಾಲಾ ಆವರಣದಲ್ಲಿ ರಸ್ತೆ ನಿರ್ಮಿಸುವ ಪ್ರಯತ್ನ ನಡೆದಿತ್ತು. ವಿಲೇಜ್ ಅಕೌಂಟೆಂಟ್ ಸ್ಥಳದಲ್ಲಿ ನಿಂತು ರಸ್ತೆ ಮಾಡಿಸಲು ಮುಂದಾಗಿದ್ದರು. ಫೆಬ್ರವರಿ 6 ರಂದು ಪ್ರಮೋದ್ ಅವರ ಗೃಹಪ್ರವೇಶ ನಡೆಯಲಿದೆ.
ಸರ್ಕಾರಿ ಶಾಲೆಯ ಕ್ರೀಡಾಂಗಣಕ್ಕೆಂದು 18 ಗುಂಟೆ ಗೋಮಾಳ ಜಾಗ ಮೀಸಲು ಇಡಲಾಗಿದೆ. ಮನೆಗೆ ಬೇರೆ ದಾರಿ ಇದ್ದರೂ ಕೂಡ
ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳು
ಮುಂದಾಗಿದ್ದರು. ಕಡೂರು ಶಾಸಕ ಆನಂದ್ ಅವರ ಆಪ್ತ ಎಂದು ಅಧಿಕಾರಿಗಳು ಮೌನ ವಹಿಸಿದ್ದರು ಎಂಬ ಆರೋಪ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು