11:12 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶಾಸಕರ ಆಪ್ತನಿಂದ ಶಾಲಾ ಮೈದಾನದಲ್ಲೇ ರಸ್ತೆ ನಿರ್ಮಿಸಲು ಯತ್ನ!: ಜೆಸಿಬಿಗೆ ಅಡ್ಡ ನಿಂತು ಶಾಲಾ ಮಕ್ಕಳ- ಪೋಷಕರ ಪ್ರತಿಭಟನೆ

31/01/2025, 15:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಸ್ಥಳೀಯ ಶಾಸಕರ ಆಪ್ತನ ಮನೆಯ ಗೃಹಪ್ರವೇಶಕ್ಕಾಗಿ ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಿಸಲು ಮುಂದಾದ ಕ್ರಮವನ್ನು ವಿರೋಧಿಸಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಜೇಸಿಬಿಗೆ ಅಡ್ಡ ನಿಂತು ಪ್ರತಿಭಟಿಸಿದ ಘಟನೆ ಕಡೂರು ತಾಲೂಕಿನ ಚೌಳಹಿರಿಯೂರು ಸಮೀಪದ ಹಡಗಲು ಗ್ರಾಮದಲ್ಲಿ ನಡೆದಿದೆ.
ಪೋಷಕರು ಮತ್ತು ಶಾಲಾ ಮಕ್ಕಳಿಂದ ಜೆಸಿಬಿಗೆ ಅಡ್ಡ ನಿಂತು ಪ್ರತಿಭಟನೆ ನಡೆಸಿದರು.
ಶಾಲೆ ಒಡೆದು ಹಾಕಿ, ಗ್ರೌಂಡ್ ನಲ್ಲಿ ರಸ್ತೆ ಮಾಡಿ ಅಂತ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.


ಕಾಂಗ್ರೆಸ್ ಕಾರ್ಯಕರ್ತ ಪ್ರಮೋದ್ ಎಂಬುವರ ಮನೆ ಗೃಹಪ್ರವೇಶಕ್ಕೆ ಶಾಲಾ ಆವರಣದಲ್ಲಿ ರಸ್ತೆ ನಿರ್ಮಿಸುವ ಪ್ರಯತ್ನ ನಡೆದಿತ್ತು. ವಿಲೇಜ್ ಅಕೌಂಟೆಂಟ್ ಸ್ಥಳದಲ್ಲಿ ನಿಂತು ರಸ್ತೆ ಮಾಡಿಸಲು ಮುಂದಾಗಿದ್ದರು. ಫೆಬ್ರವರಿ 6 ರಂದು ಪ್ರಮೋದ್ ಅವರ ಗೃಹಪ್ರವೇಶ ನಡೆಯಲಿದೆ.
ಸರ್ಕಾರಿ ಶಾಲೆಯ ಕ್ರೀಡಾಂಗಣಕ್ಕೆಂದು 18 ಗುಂಟೆ ಗೋಮಾಳ ಜಾಗ ಮೀಸಲು ಇಡಲಾಗಿದೆ. ಮನೆಗೆ ಬೇರೆ ದಾರಿ ಇದ್ದರೂ ಕೂಡ
ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳು
ಮುಂದಾಗಿದ್ದರು. ಕಡೂರು ಶಾಸಕ ಆನಂದ್ ಅವರ ಆಪ್ತ ಎಂದು ಅಧಿಕಾರಿಗಳು ಮೌನ ವಹಿಸಿದ್ದರು ಎಂಬ ಆರೋಪ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು