11:13 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಮ್ಮ ಆಡಳಿತ ವೈಖರಿ, ಜನ ಸ್ಪಂದನೆ ಕಂಡು ಬಿಜೆಪಿ ಕಂಗಾಲಾಗಿದೆ: ತೀರ್ಥಹಳ್ಳಿ ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ

31/01/2025, 16:05

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಹುಲಿ ಬಣ್ಣ ನೋಡಿ ನರಿ ತನ್ನ ಚರ್ಮ ಸುಲಿದುಕೊಳ್ತಂತೆ ಹಾಗೆ ಬಿಜೆಪಿಯವರ ಪ್ರತಿಭಟನೆ ಕಥೆಯಾಗಿದೆ. ನಮ್ಮ ಆಡಳಿತ ವೈಖರಿ ಹಾಗೂ ಜನರ ಸ್ಪಂದನೆ ನೋಡಿ ಇನ್ಮೇಲೆ ಆಡಳಿತ ನಡೆಸುವುದು ನಮಗೆ ಕಷ್ಟ ಆಗಲಿದೆ. ನಮ್ಮ ನಾಯಕರ ಬಳಿ ಮುಖ ಇಟ್ಟುಕೊಂಡು ತಿರುಗಲು ಆಗುವುದಿಲ್ಲ ಎಂಬ ಕಾರಣದಿಂದ ಪ್ರತಿಭಟನೆ ನಡೆಸಿದ್ದಾರೆ ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಹೇಳಿದರು.
ಗುರುವಾರ ಪಟ್ಟಣ ಪಂಚಾಯತ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದ್ದಾರೆ. 2021ರಿಂದ ಜನಾದೇಶದ ಪ್ರಕಾರ ಅಧಿಕಾರ ನಡೆಸುತ್ತಿದ್ದೇವೆ. ಇಲ್ಲಿಯವರೆಗೆ ಮೂವರು ಮಹಿಳಾ ಜನಪ್ರತಿನಿಧಿಗಳು ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಇನ್ನು ಚುನಾವಣೆಗೆ 20 ತಿಂಗಳು ಬಾಕಿ ಇದೆ. ಹಾಗಾಗಿ ಈಗಲೇ ಪ್ರತಿಭಟನೆ ಮಾಡಿ ಸುಳ್ಳು ಸುದ್ದಿ ಹಬ್ಬಿಸಿದರೆ ಜನ ನಂಬುತ್ತಾರೆ ಎಂದು ತಿಳಿದಿದ್ದಾರೆ. ಹತ್ತು ವರ್ಷ ನಮ್ಮ ಜೊತೆಗೆ ಇದ್ದರೂ ನಮ್ಮ ಬುದ್ದಿ ಬಂದಿಲ್ಲ ಎಂದಿದ್ದಾರೆ. ಅವರ ಬುದ್ದಿ ಹಿಡಿಸದ ಕಾರಣ ಪಕ್ಷ ಬಿಟ್ಟು ಬಂದಿದ್ದು ಎಂದು ತಿಳಿಸಿದರು.
ಶ್ವಾನಗಳಿಗೆ ಸಂತಾನಹರಣ ಚಿಕಿತ್ಸೆ ಬಗ್ಗೆ ಮಾತನಾಡುತ್ತಾರೆ. ಅದು ಇಡೀ ದೇಶದ ಸಮಸ್ಯೆ.ಗ್ರಾಮಪಂಚಾಯಿತಿಯಿಂದ ಹಿಡಿದು ದೆಹಲಿಯವರೆಗೂ ಬೀದಿ ನಾಯಿಗಳ ಸಮಸ್ಯೆ ಇರುವುದೇ, ಇಡೀ ಪಟ್ಟಣದಲ್ಲಿ 2000ಕ್ಕೂ ಹೆಚ್ಚು ಬೀದಿ ನಾಯಿಗಳಿವೆ. ಗಂಡು ನಾಯಿ ಹೆಣ್ಣು ನಾಯಿ ಎರಡಕ್ಕೂ ಸರ್ಜರಿ ಮಾಡಿದ್ದೇವೆ. ನಮ್ಮ ಬಜೆಟ್ ಇತಿ ಮಿತಿ ನೋಡಿಕೊಂಡು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲಾಗುತ್ತಿದೆ. ಪಟ್ಟಣದಲ್ಲಿ ಇರುವ ಎಲ್ಲಾ ನಾಯಿಗಳಿಗೂ ಸಂತಾನಹರಣ ಚಿಕಿತ್ಸೆ ಮಾಡಿಸಲು 400ಲಕ್ಷಕ್ಕೂ ಹೆಚ್ಚಿನ ಹಣ ಬೇಕು ಎಂದರು.
ಶಾಸಕರನ್ನು ಅತ್ಯಂತ ಗೌರವದಿಂದ ಕಂಡಿದ್ದೇವೆ, ಶಾಸಕರನ್ನು ಬಿಟ್ಟು ಒಂದೇ ಒಂದು ಕಾರ್ಯಕ್ರಮ ಮಾಡಿಲ್ಲ. ಪಕ್ಷ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ. ಆದರೆ ಪ್ರತಿಯೊಂದು ಸುಳ್ಳು ಹೇಳಿ ಜನರ ಕಣ್ತಪ್ಪಿಸುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ನಮ್ಮ ಜೊತೆಗೆ ಇದ್ದರು ಎನ್ನುತ್ತಾರೆ. ಅವರ ಜೊತೆಗೆ ಹೋಗಿದ್ದಕ್ಕೆ ಎರಡು ಬಾರಿ ಪೂರ್ಣ ಬಹುಮತ ಅವರಿಗೆ ಬಂದಿದ್ದು. 6 ಸ್ಥಾನದಲ್ಲಿ ಇದ್ದ ಇವರು 14 ಸ್ಥಾನ ತಲುಪಿದ್ದು ನಾನು ಹೋದಾಗ, ನಾನು ಪಕ್ಷ ಬಿಟ್ಟು ಹೊರ ಬಂದ ಮೇಲೆ ಅವರು ಬಂದಿದ್ದು ಅದೇ ಸ್ಥಾನಕ್ಕೆ ಎಂದರು.

ವಾಣಿಜ್ಯ ಸಂಕಿರ್ಣ, ಕುವೆಂಪು ರಂಗಮಂದಿರ, ಸುವರ್ಣ ಕರ್ನಾಟಕ ಸಂಭ್ರಮ, ಕಾಂತರ 2 ನಾಟಕ, ಆಳ್ವಾಸ್ ಸಂಸ್ಥೆಯ ಮಕ್ಕಳಿಂದ ಕಾರ್ಯಕ್ರಮ, ಕ್ರಿಕೆಟ್ ಟೂರ್ನಿಮೆಂಟ್, ಆರೋಗ್ಯ ಶಿಬಿರ, ಹೀಗೆ ಹಲವಾರು ಕಾರ್ಯಕ್ರಮ ಮಾಡಿಕೊಂಡು ಬಂದಿದ್ದೇವೆ. ಒಳ್ಳೆ ಕೆಲಸ ಮಾಡುವವರಿಗೆ ತೊಂದರೆ ಕೊಡಬಾರದು.
ನಮ್ಮ ಆಡಳಿತದ ಬಗ್ಗೆ ಜನರಿಗೆ ಅಸಮಾಧಾನ ಇಲ್ಲ. ಹಾಗಾಗಿ ಈ ರೀತಿ ಪ್ರತಿಭಟನೆ ಮಾಡಿ ತಾವು ಇದ್ದೇವೆ ಎಂದು ತೋರಿಸಿಕೊಳ್ಳುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು