12:31 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ

31/01/2025, 16:25

ಬೆಳಗಾವಿ(reporterkarnataka.com): ತೀವ್ರ ಕುತೂಹಲ ಕೆರಳಿಸಿದ್ದ ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಉಭಯ ಪಕ್ಷಗಳು ಸಮಬಲವಿರುವ ಕಿತ್ತೂರು ಪಪಂನಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಸಲಾಯಿತು.
ಪಟ್ಟಣ ಪಂಚಾಯತಿ ಸಭಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ನ ಜೈಸಿದ್ದರಾಮ (ಸಿದ್ದು ) ಮಾರಿಹಾಳ ಹಾಗೂ ಉಪಾಧ್ಯಕ್ಷರಾಗಿ ಅದೇ ಪಕ್ಷದ ಸಮೀರಾಬಾನು ಸುತಗಟ್ಟಿ ಆಯ್ಕೆಯಾಗಿದ್ದಾರೆ. ಚೀಟಿ ಎತ್ತುವ ಮೂಲಕ ಆಯ್ಕೆ ನಡೆದಿದೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿತ್ತು. ಕಾಂಗ್ರೆಸ್ ಪಕ್ಷದಿಂದ ಜೈಸಿದ್ದರಾಮ (ಸಿದ್ದು) ಮಾರಿಹಾಳ ಹಾಗೂ ಬಿಜೆಪಿಯಿಂದ ನಾಗರಾಜ ಅಸುಂಡಿ ಉಮೇದುವಾರಿಕೆ ಸಲ್ಲಿಸಿದ್ದರು.
ಉಪಾಧ್ಯಕ್ಷ ಸ್ಥಾನವೂ ಸಾಮಾನ್ಯ ಮಹಿಳೆ ಮೀಸಲಾತಿಗೆ ಒಳಪಟ್ಟಿತ್ತು. ಕಾಂಗ್ರೆಸ್ ನಿಂದ ಸಮೀರಾಬಾನು ಸುತಗಟ್ಟಿ ಹಾಗೂ ಬಿಜೆಪಿಯಿಂದ ಲಕ್ಷ್ಮೀ ಬಡಿಗೇರ ಉಮೇದುವಾರಿಕೆ ಸಲ್ಲಿಸಿದ್ದರು. ಉಭಯ ಪಕ್ಷಗಳಲ್ಲಿ ಸಮಬಲವಿರುವ ಕಾರಣ ಎಲ್ಲರ ನಿರೀಕ್ಷೆಯಂತೆ ಚೀಟಿ ಎತ್ತುವ ಮೂಲಕ ಚುನಾವಣೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ಮಾಡಲಾಯಿತು. ಇದಕ್ಕೂ ಮೊದಲು ಕೈ ಎತ್ತುವ ಮೂಲಕ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೂ ಚುನಾವಣಾಧಿಕಾರಿಗಳು ಸೂಚನೆ ನೀಡಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಾಗಿ ಶಾಸಕ ಬಾಬಾಸಾಹೇಬ ಪಾಟೀಲ್ ಮತ ಸೇರಿದಂತೆ ಒಟ್ಟು 10 ಮತಗಳು ಚಲಾವಣೆಗೊಂಡವು. ಇದರಂತೆಯೇ ಬಿಜೆಪಿ ಅಭ್ಯರ್ಥಿಗಳ ಪರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ ಸೇರಿದಂತೆ ಒಟ್ಟು 10 ಮತಗಳು ಬಿಜೆಪಿ ಅಭ್ಯರ್ಥಿಗಳ ಪರ ಚಲಾವಣೆಗೊಂಡವು.
ಈ ಪ್ರಕಾರ ಸಮಬಲವಿರುವ ಕಾರಣದಿಂದಾಗಿ ಚುನಾವಣಾಧಿಕಾರಿಗಳು ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ
ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು