2:14 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ

31/01/2025, 16:25

ಬೆಳಗಾವಿ(reporterkarnataka.com): ತೀವ್ರ ಕುತೂಹಲ ಕೆರಳಿಸಿದ್ದ ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಉಭಯ ಪಕ್ಷಗಳು ಸಮಬಲವಿರುವ ಕಿತ್ತೂರು ಪಪಂನಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಸಲಾಯಿತು.
ಪಟ್ಟಣ ಪಂಚಾಯತಿ ಸಭಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ನ ಜೈಸಿದ್ದರಾಮ (ಸಿದ್ದು ) ಮಾರಿಹಾಳ ಹಾಗೂ ಉಪಾಧ್ಯಕ್ಷರಾಗಿ ಅದೇ ಪಕ್ಷದ ಸಮೀರಾಬಾನು ಸುತಗಟ್ಟಿ ಆಯ್ಕೆಯಾಗಿದ್ದಾರೆ. ಚೀಟಿ ಎತ್ತುವ ಮೂಲಕ ಆಯ್ಕೆ ನಡೆದಿದೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿತ್ತು. ಕಾಂಗ್ರೆಸ್ ಪಕ್ಷದಿಂದ ಜೈಸಿದ್ದರಾಮ (ಸಿದ್ದು) ಮಾರಿಹಾಳ ಹಾಗೂ ಬಿಜೆಪಿಯಿಂದ ನಾಗರಾಜ ಅಸುಂಡಿ ಉಮೇದುವಾರಿಕೆ ಸಲ್ಲಿಸಿದ್ದರು.
ಉಪಾಧ್ಯಕ್ಷ ಸ್ಥಾನವೂ ಸಾಮಾನ್ಯ ಮಹಿಳೆ ಮೀಸಲಾತಿಗೆ ಒಳಪಟ್ಟಿತ್ತು. ಕಾಂಗ್ರೆಸ್ ನಿಂದ ಸಮೀರಾಬಾನು ಸುತಗಟ್ಟಿ ಹಾಗೂ ಬಿಜೆಪಿಯಿಂದ ಲಕ್ಷ್ಮೀ ಬಡಿಗೇರ ಉಮೇದುವಾರಿಕೆ ಸಲ್ಲಿಸಿದ್ದರು. ಉಭಯ ಪಕ್ಷಗಳಲ್ಲಿ ಸಮಬಲವಿರುವ ಕಾರಣ ಎಲ್ಲರ ನಿರೀಕ್ಷೆಯಂತೆ ಚೀಟಿ ಎತ್ತುವ ಮೂಲಕ ಚುನಾವಣೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ಮಾಡಲಾಯಿತು. ಇದಕ್ಕೂ ಮೊದಲು ಕೈ ಎತ್ತುವ ಮೂಲಕ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೂ ಚುನಾವಣಾಧಿಕಾರಿಗಳು ಸೂಚನೆ ನೀಡಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಾಗಿ ಶಾಸಕ ಬಾಬಾಸಾಹೇಬ ಪಾಟೀಲ್ ಮತ ಸೇರಿದಂತೆ ಒಟ್ಟು 10 ಮತಗಳು ಚಲಾವಣೆಗೊಂಡವು. ಇದರಂತೆಯೇ ಬಿಜೆಪಿ ಅಭ್ಯರ್ಥಿಗಳ ಪರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ ಸೇರಿದಂತೆ ಒಟ್ಟು 10 ಮತಗಳು ಬಿಜೆಪಿ ಅಭ್ಯರ್ಥಿಗಳ ಪರ ಚಲಾವಣೆಗೊಂಡವು.
ಈ ಪ್ರಕಾರ ಸಮಬಲವಿರುವ ಕಾರಣದಿಂದಾಗಿ ಚುನಾವಣಾಧಿಕಾರಿಗಳು ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ
ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು