12:40 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ

31/01/2025, 16:25

ಬೆಳಗಾವಿ(reporterkarnataka.com): ತೀವ್ರ ಕುತೂಹಲ ಕೆರಳಿಸಿದ್ದ ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಉಭಯ ಪಕ್ಷಗಳು ಸಮಬಲವಿರುವ ಕಿತ್ತೂರು ಪಪಂನಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಸಲಾಯಿತು.
ಪಟ್ಟಣ ಪಂಚಾಯತಿ ಸಭಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ನ ಜೈಸಿದ್ದರಾಮ (ಸಿದ್ದು ) ಮಾರಿಹಾಳ ಹಾಗೂ ಉಪಾಧ್ಯಕ್ಷರಾಗಿ ಅದೇ ಪಕ್ಷದ ಸಮೀರಾಬಾನು ಸುತಗಟ್ಟಿ ಆಯ್ಕೆಯಾಗಿದ್ದಾರೆ. ಚೀಟಿ ಎತ್ತುವ ಮೂಲಕ ಆಯ್ಕೆ ನಡೆದಿದೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿತ್ತು. ಕಾಂಗ್ರೆಸ್ ಪಕ್ಷದಿಂದ ಜೈಸಿದ್ದರಾಮ (ಸಿದ್ದು) ಮಾರಿಹಾಳ ಹಾಗೂ ಬಿಜೆಪಿಯಿಂದ ನಾಗರಾಜ ಅಸುಂಡಿ ಉಮೇದುವಾರಿಕೆ ಸಲ್ಲಿಸಿದ್ದರು.
ಉಪಾಧ್ಯಕ್ಷ ಸ್ಥಾನವೂ ಸಾಮಾನ್ಯ ಮಹಿಳೆ ಮೀಸಲಾತಿಗೆ ಒಳಪಟ್ಟಿತ್ತು. ಕಾಂಗ್ರೆಸ್ ನಿಂದ ಸಮೀರಾಬಾನು ಸುತಗಟ್ಟಿ ಹಾಗೂ ಬಿಜೆಪಿಯಿಂದ ಲಕ್ಷ್ಮೀ ಬಡಿಗೇರ ಉಮೇದುವಾರಿಕೆ ಸಲ್ಲಿಸಿದ್ದರು. ಉಭಯ ಪಕ್ಷಗಳಲ್ಲಿ ಸಮಬಲವಿರುವ ಕಾರಣ ಎಲ್ಲರ ನಿರೀಕ್ಷೆಯಂತೆ ಚೀಟಿ ಎತ್ತುವ ಮೂಲಕ ಚುನಾವಣೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ಮಾಡಲಾಯಿತು. ಇದಕ್ಕೂ ಮೊದಲು ಕೈ ಎತ್ತುವ ಮೂಲಕ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೂ ಚುನಾವಣಾಧಿಕಾರಿಗಳು ಸೂಚನೆ ನೀಡಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಾಗಿ ಶಾಸಕ ಬಾಬಾಸಾಹೇಬ ಪಾಟೀಲ್ ಮತ ಸೇರಿದಂತೆ ಒಟ್ಟು 10 ಮತಗಳು ಚಲಾವಣೆಗೊಂಡವು. ಇದರಂತೆಯೇ ಬಿಜೆಪಿ ಅಭ್ಯರ್ಥಿಗಳ ಪರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ ಸೇರಿದಂತೆ ಒಟ್ಟು 10 ಮತಗಳು ಬಿಜೆಪಿ ಅಭ್ಯರ್ಥಿಗಳ ಪರ ಚಲಾವಣೆಗೊಂಡವು.
ಈ ಪ್ರಕಾರ ಸಮಬಲವಿರುವ ಕಾರಣದಿಂದಾಗಿ ಚುನಾವಣಾಧಿಕಾರಿಗಳು ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ
ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು