10:26 PM Thursday26 - February 2026
ಬ್ರೇಕಿಂಗ್ ನ್ಯೂಸ್
ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

ಇತ್ತೀಚಿನ ಸುದ್ದಿ

ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ; ಲಕ್ಷಾಂತರ ರೂ ವಂಚನೆ; ಆರೋಪಿ ಅಂದರ್

31/01/2025, 16:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಜನರು ಬೇಸತ್ತು ಗ್ರಾಮಗಳನ್ನು ತೊರೆಯುವುದರ ಜೊತೆಗೆ ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಖತರ್ನಾಕ್ ಒಬ್ಬ ಸಾಲ ಕೊಡಿಸುವ ನೆಪದಲ್ಲಿ ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಮಾದನಹಳ್ಳಿ ಗ್ರಾಮದ ಸುನಿಲ್ ಎಂಬುವವರೇ ಬಂಧಿತ ಆರೋಪಿ.

ಪ್ರತಿಷ್ಠಿತ ಫೈನಾನ್ಸ್ ಗಳಲ್ಲಿ ಹಾಗೂ ಸ್ಥಳೀಯ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ಲಕ್ಷಾಂತರ ರೂ ವಂಚಿಸಿದ ಐನಾತಿಯನ್ನ ಡಿವೈಎಸ್ಪಿ ರಘು ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್ ಹಾಗೂ ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಹಾಗೂ ದಫೆದಾರ್ ದೊಡ್ಡಯ್ಯ ಕಾರ್ಯಚರಣೆ ಮಾಡಿ ಬಂಧಿಸಿದ್ದಾರೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಆಕಲ ಗ್ರಾಮದ ಮಹಿಳೆಯೋರ್ವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸುನಿಲ್ ನನ್ನು ವಶಕ್ಕೆ ಪಡೆದಿದ್ದಾರೆ.
ಹುಲ್ಲಹಳ್ಳಿಯ ಕಲ್ಯಾಣಿ ಮೋಟಾರ್ಸ್ ನಲ್ಲಿ ಎಕ್ಸಿಕ್ಯುಟಿವ್ ಸೇಲ್ಸ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ಮಾದನಹಳ್ಳಿ ಸುನಿಲ್ ತನಗೆ ಪ್ರತಿಷ್ಠಿತ ಫೈನಾನ್ಸ್ ಗಳ ವ್ಯವಸ್ಥಾಪಕರು ಪರಿಚಯವಿದ್ದು ಲಕ್ಷಾಂತರ ರೂಪಾಯಿಗಳನ್ನ ಕಡಿಮೆ ಬಡ್ಡಿ ದರದಲ್ಲಿ ಕೊಡಿಸುವುದಾಗಿ ನಂಬಿಸಿ ಇದಕ್ಕಾಗಿ ಕಮೀಷನ್ ಕೊಡಬೇಕೆಂದು ಹೇಳಿದ್ದಾನೆ.
ಈತನ ಬೆಣ್ಣಿ ಮಾತಿಗೆ ಕರಗಿದ ಅಮಾಯಕ ಜನ ಮೊದಲೇ ಕಮಿಷನ್ ಹಣ ನೀಡಿದ್ದಾರೆ. ಸಾಕಷ್ಟು ಜನರಿಂದ ಹಣ ಪಡೆದಿದ್ದರೂ ಯಾವುದೇ ಸಾಲ ಕೊಡಿಸಿಲ್ಲವೆಂದು ಹೇಳಲಾಗಿದೆ.
ಅಲ್ಲದೆ ಕಮೀಷನ್ ಹೆಸರಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದಾನೆಂದು ತಿಳಿದು ಬಂದಿದೆ.
ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಶಾಕ್ ನಿಂದ ನರಳುತ್ತಿರುವ ಜನರಿಗೆ ಐನಾತಿಯ ವಂಚನೆ ಮತ್ತಷ್ಟು ಚಿಂತೆಗೀಡು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು