1:34 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ; ಲಕ್ಷಾಂತರ ರೂ ವಂಚನೆ; ಆರೋಪಿ ಅಂದರ್

31/01/2025, 16:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಜನರು ಬೇಸತ್ತು ಗ್ರಾಮಗಳನ್ನು ತೊರೆಯುವುದರ ಜೊತೆಗೆ ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಖತರ್ನಾಕ್ ಒಬ್ಬ ಸಾಲ ಕೊಡಿಸುವ ನೆಪದಲ್ಲಿ ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಮಾದನಹಳ್ಳಿ ಗ್ರಾಮದ ಸುನಿಲ್ ಎಂಬುವವರೇ ಬಂಧಿತ ಆರೋಪಿ.

ಪ್ರತಿಷ್ಠಿತ ಫೈನಾನ್ಸ್ ಗಳಲ್ಲಿ ಹಾಗೂ ಸ್ಥಳೀಯ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ಲಕ್ಷಾಂತರ ರೂ ವಂಚಿಸಿದ ಐನಾತಿಯನ್ನ ಡಿವೈಎಸ್ಪಿ ರಘು ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್ ಹಾಗೂ ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಹಾಗೂ ದಫೆದಾರ್ ದೊಡ್ಡಯ್ಯ ಕಾರ್ಯಚರಣೆ ಮಾಡಿ ಬಂಧಿಸಿದ್ದಾರೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಆಕಲ ಗ್ರಾಮದ ಮಹಿಳೆಯೋರ್ವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸುನಿಲ್ ನನ್ನು ವಶಕ್ಕೆ ಪಡೆದಿದ್ದಾರೆ.
ಹುಲ್ಲಹಳ್ಳಿಯ ಕಲ್ಯಾಣಿ ಮೋಟಾರ್ಸ್ ನಲ್ಲಿ ಎಕ್ಸಿಕ್ಯುಟಿವ್ ಸೇಲ್ಸ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ಮಾದನಹಳ್ಳಿ ಸುನಿಲ್ ತನಗೆ ಪ್ರತಿಷ್ಠಿತ ಫೈನಾನ್ಸ್ ಗಳ ವ್ಯವಸ್ಥಾಪಕರು ಪರಿಚಯವಿದ್ದು ಲಕ್ಷಾಂತರ ರೂಪಾಯಿಗಳನ್ನ ಕಡಿಮೆ ಬಡ್ಡಿ ದರದಲ್ಲಿ ಕೊಡಿಸುವುದಾಗಿ ನಂಬಿಸಿ ಇದಕ್ಕಾಗಿ ಕಮೀಷನ್ ಕೊಡಬೇಕೆಂದು ಹೇಳಿದ್ದಾನೆ.
ಈತನ ಬೆಣ್ಣಿ ಮಾತಿಗೆ ಕರಗಿದ ಅಮಾಯಕ ಜನ ಮೊದಲೇ ಕಮಿಷನ್ ಹಣ ನೀಡಿದ್ದಾರೆ. ಸಾಕಷ್ಟು ಜನರಿಂದ ಹಣ ಪಡೆದಿದ್ದರೂ ಯಾವುದೇ ಸಾಲ ಕೊಡಿಸಿಲ್ಲವೆಂದು ಹೇಳಲಾಗಿದೆ.
ಅಲ್ಲದೆ ಕಮೀಷನ್ ಹೆಸರಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದಾನೆಂದು ತಿಳಿದು ಬಂದಿದೆ.
ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಶಾಕ್ ನಿಂದ ನರಳುತ್ತಿರುವ ಜನರಿಗೆ ಐನಾತಿಯ ವಂಚನೆ ಮತ್ತಷ್ಟು ಚಿಂತೆಗೀಡು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು