9:14 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸಕಲೇಶಪುರ – ಮೂಡಿಗೆರೆ ಗಡಿಭಾಗದಲ್ಲಿ ಒಂಟಿ ಸಲಗ ಅನುಮಾನಾಸ್ಪದ ಸಾವು: ಅರಣ್ಯ ಅಧಿಕಾರಿಗಳು ಭೇಟಿ

31/01/2025, 22:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಮತ್ತು ಮೂಡಿಗೆರೆ ಗಡಿಭಾಗದ ಗ್ರಾಮವಾದ ಮರಗುಂದದಲ್ಲಿ ನಡೆದಿದೆ.


ಸಕಲೇಶಪುರ ಅರಣ್ಯ ವಲಯ ವ್ಯಾಪ್ತಿಯ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂದ ಗ್ರಾಮದ ಸಮೀಪ ಅರಣ್ಯದಲ್ಲಿ ಕಾಡಾನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.
ಮರಗುಂಡ ಬೆಟ್ಟದಭೈರವೇಶ್ವರ ದೇವಸ್ಥಾನದ ಸಮೀಪದ ಅರಣ್ಯದಲ್ಲಿ ಆನೆಯ ಮೃತದೇಹ ಬಂಡೆಕಲ್ಲುಗಳ ನಡುವೆ ಪತ್ತೆಯಾಗಿದೆ. ಆನೆ ಸಾವನ್ನಪ್ಪಿ ಅಂದಾಜು ಒಂದು ತಿಂಗಳು ಆಗಿರಬಹುದು ಎನ್ನಲಾಗಿದೆ.
ಕಾಡಾನೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶನಿವಾರ ಮುಂಜಾನೆ ಮೃತದೇಹದ ಕೊಳೆತ ವಾಸನೆ ಬಂದಿದ್ದರಿಂದ ಆನೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಗ್ರಾಮಸ್ಥರು ನೀಡಿದ ಮಾಹಿತಿಯನ್ನು ಆದರಿಸಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಮಹಜರು ನಡೆಸಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ ಇದು ಒಂಟಿಕೊಂಬಿನ ಆನೆಯಾಗಿದ್ದು, ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಓಡಾಡಿಕೊಂಡಿತ್ತು. ಜನರಿಗೆ ಹೆಚ್ಚೇನು ತೊಂದರೆ ಕೊಡುತ್ತಿರುಲಿಲ್ಲ ಎಂದು ಹೇಳುತ್ತಾರೆ.
ಕಾಡಾನೆ ಬಂಡೆ ಕಲ್ಲುಗಳ ನುಡವೆ ಸಿಲುಕಿ ಹೊರಬರಲಾರದೇ ಸಾವನ್ನಪ್ಪಿರಬಹುದು ಆಥವಾ ಬೇರೆ ಆನೆಗಳ ಜೊತೆ ಕಾದಾಡಿ ಸಾವನ್ನಪ್ಪಿರಬಹುದಾ, ಅನಾರೋಗ್ಯದಿಂದ ಸಾವನ್ನಪ್ಪಿರಬಹುದ ಅಥವಾ ಬೇರೆ ಯಾವ ರೀತಿಯಲ್ಲಾದರೂ ಸಾವನ್ನಪ್ಪಿರಬಹುದಾ ಎಂಬುದು ಮರಣೋತ್ತರ ಪರೀಕ್ಷೆ ಮತ್ತು ತನಿಖೆಯಿಂದಷ್ಟೇ ತಿಳಿದುಬರಬೇಕು.
ಆನೆಯ ಒಂಟಿ ದಂತವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬೇರ್ಪಡಿಸಿ ಇಲಾಖೆಯ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು