10:30 AM Saturday5 - September 2026
ಬ್ರೇಕಿಂಗ್ ನ್ಯೂಸ್
test ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸಕಲೇಶಪುರ – ಮೂಡಿಗೆರೆ ಗಡಿಭಾಗದಲ್ಲಿ ಒಂಟಿ ಸಲಗ ಅನುಮಾನಾಸ್ಪದ ಸಾವು: ಅರಣ್ಯ ಅಧಿಕಾರಿಗಳು ಭೇಟಿ

31/01/2025, 22:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಮತ್ತು ಮೂಡಿಗೆರೆ ಗಡಿಭಾಗದ ಗ್ರಾಮವಾದ ಮರಗುಂದದಲ್ಲಿ ನಡೆದಿದೆ.


ಸಕಲೇಶಪುರ ಅರಣ್ಯ ವಲಯ ವ್ಯಾಪ್ತಿಯ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂದ ಗ್ರಾಮದ ಸಮೀಪ ಅರಣ್ಯದಲ್ಲಿ ಕಾಡಾನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.
ಮರಗುಂಡ ಬೆಟ್ಟದಭೈರವೇಶ್ವರ ದೇವಸ್ಥಾನದ ಸಮೀಪದ ಅರಣ್ಯದಲ್ಲಿ ಆನೆಯ ಮೃತದೇಹ ಬಂಡೆಕಲ್ಲುಗಳ ನಡುವೆ ಪತ್ತೆಯಾಗಿದೆ. ಆನೆ ಸಾವನ್ನಪ್ಪಿ ಅಂದಾಜು ಒಂದು ತಿಂಗಳು ಆಗಿರಬಹುದು ಎನ್ನಲಾಗಿದೆ.
ಕಾಡಾನೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶನಿವಾರ ಮುಂಜಾನೆ ಮೃತದೇಹದ ಕೊಳೆತ ವಾಸನೆ ಬಂದಿದ್ದರಿಂದ ಆನೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಗ್ರಾಮಸ್ಥರು ನೀಡಿದ ಮಾಹಿತಿಯನ್ನು ಆದರಿಸಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಮಹಜರು ನಡೆಸಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ ಇದು ಒಂಟಿಕೊಂಬಿನ ಆನೆಯಾಗಿದ್ದು, ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಓಡಾಡಿಕೊಂಡಿತ್ತು. ಜನರಿಗೆ ಹೆಚ್ಚೇನು ತೊಂದರೆ ಕೊಡುತ್ತಿರುಲಿಲ್ಲ ಎಂದು ಹೇಳುತ್ತಾರೆ.
ಕಾಡಾನೆ ಬಂಡೆ ಕಲ್ಲುಗಳ ನುಡವೆ ಸಿಲುಕಿ ಹೊರಬರಲಾರದೇ ಸಾವನ್ನಪ್ಪಿರಬಹುದು ಆಥವಾ ಬೇರೆ ಆನೆಗಳ ಜೊತೆ ಕಾದಾಡಿ ಸಾವನ್ನಪ್ಪಿರಬಹುದಾ, ಅನಾರೋಗ್ಯದಿಂದ ಸಾವನ್ನಪ್ಪಿರಬಹುದ ಅಥವಾ ಬೇರೆ ಯಾವ ರೀತಿಯಲ್ಲಾದರೂ ಸಾವನ್ನಪ್ಪಿರಬಹುದಾ ಎಂಬುದು ಮರಣೋತ್ತರ ಪರೀಕ್ಷೆ ಮತ್ತು ತನಿಖೆಯಿಂದಷ್ಟೇ ತಿಳಿದುಬರಬೇಕು.
ಆನೆಯ ಒಂಟಿ ದಂತವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬೇರ್ಪಡಿಸಿ ಇಲಾಖೆಯ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು