9:03 PM Saturday9 - August 2025
ಬ್ರೇಕಿಂಗ್ ನ್ಯೂಸ್
ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು…

ಇತ್ತೀಚಿನ ಸುದ್ದಿ

ಸಕಲೇಶಪುರ – ಮೂಡಿಗೆರೆ ಗಡಿಭಾಗದಲ್ಲಿ ಒಂಟಿ ಸಲಗ ಅನುಮಾನಾಸ್ಪದ ಸಾವು: ಅರಣ್ಯ ಅಧಿಕಾರಿಗಳು ಭೇಟಿ

31/01/2025, 22:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಮತ್ತು ಮೂಡಿಗೆರೆ ಗಡಿಭಾಗದ ಗ್ರಾಮವಾದ ಮರಗುಂದದಲ್ಲಿ ನಡೆದಿದೆ.


ಸಕಲೇಶಪುರ ಅರಣ್ಯ ವಲಯ ವ್ಯಾಪ್ತಿಯ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂದ ಗ್ರಾಮದ ಸಮೀಪ ಅರಣ್ಯದಲ್ಲಿ ಕಾಡಾನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.
ಮರಗುಂಡ ಬೆಟ್ಟದಭೈರವೇಶ್ವರ ದೇವಸ್ಥಾನದ ಸಮೀಪದ ಅರಣ್ಯದಲ್ಲಿ ಆನೆಯ ಮೃತದೇಹ ಬಂಡೆಕಲ್ಲುಗಳ ನಡುವೆ ಪತ್ತೆಯಾಗಿದೆ. ಆನೆ ಸಾವನ್ನಪ್ಪಿ ಅಂದಾಜು ಒಂದು ತಿಂಗಳು ಆಗಿರಬಹುದು ಎನ್ನಲಾಗಿದೆ.
ಕಾಡಾನೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶನಿವಾರ ಮುಂಜಾನೆ ಮೃತದೇಹದ ಕೊಳೆತ ವಾಸನೆ ಬಂದಿದ್ದರಿಂದ ಆನೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಗ್ರಾಮಸ್ಥರು ನೀಡಿದ ಮಾಹಿತಿಯನ್ನು ಆದರಿಸಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಮಹಜರು ನಡೆಸಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ ಇದು ಒಂಟಿಕೊಂಬಿನ ಆನೆಯಾಗಿದ್ದು, ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಓಡಾಡಿಕೊಂಡಿತ್ತು. ಜನರಿಗೆ ಹೆಚ್ಚೇನು ತೊಂದರೆ ಕೊಡುತ್ತಿರುಲಿಲ್ಲ ಎಂದು ಹೇಳುತ್ತಾರೆ.
ಕಾಡಾನೆ ಬಂಡೆ ಕಲ್ಲುಗಳ ನುಡವೆ ಸಿಲುಕಿ ಹೊರಬರಲಾರದೇ ಸಾವನ್ನಪ್ಪಿರಬಹುದು ಆಥವಾ ಬೇರೆ ಆನೆಗಳ ಜೊತೆ ಕಾದಾಡಿ ಸಾವನ್ನಪ್ಪಿರಬಹುದಾ, ಅನಾರೋಗ್ಯದಿಂದ ಸಾವನ್ನಪ್ಪಿರಬಹುದ ಅಥವಾ ಬೇರೆ ಯಾವ ರೀತಿಯಲ್ಲಾದರೂ ಸಾವನ್ನಪ್ಪಿರಬಹುದಾ ಎಂಬುದು ಮರಣೋತ್ತರ ಪರೀಕ್ಷೆ ಮತ್ತು ತನಿಖೆಯಿಂದಷ್ಟೇ ತಿಳಿದುಬರಬೇಕು.
ಆನೆಯ ಒಂಟಿ ದಂತವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬೇರ್ಪಡಿಸಿ ಇಲಾಖೆಯ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು