10:09 AM Saturday1 - February 2025
ಬ್ರೇಕಿಂಗ್ ನ್ಯೂಸ್
ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ;… ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ! 88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ… ಆರ್ಥಿಕ ಸಂಕಷ್ಟದಿಂದ ವೈಜಾಗ್ ಸ್ಟೀಲ್ ಕಾರ್ಖಾನೆ ಪಾರು: 11,440 ಕೋಟಿ ರೂ. ಪುನಶ್ಚೇತನ… ಕೇಂದ್ರ – ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಮಾಜಿ… ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ… ನಂಜನಗೂಡು: 5 ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಎಫ್ ಐಆರ್; 4 ಮಂದಿ… ಬಿಜೆಪಿ 12ನೇ ಶತಮಾನದಲ್ಲಿ ಇದ್ದಿದ್ದರೆ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿತ್ತು: ಸಚಿವ…

ಇತ್ತೀಚಿನ ಸುದ್ದಿ

ಕೆ.ಆರ್.ಪೇಟೆ: ಹದಗೆಟ್ಟ ರಸ್ತೆ ..! ಸಾರ್ವಜನಿಕರು, ಅಂಗಡಿ ಮಾಲೀಕರ ಅಸಮಾಧಾನ

01/02/2025, 09:21

ಮಂಡ್ಯ(reporterkarnataka.com): ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹೊಸ ಕಿಕ್ಕೇರಿ ರಸ್ತೆಯಲ್ಲಿ ಕರ್ಣಾಟಕ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಸೇರಿದಂತೆ ಹಲವು ವಾಣಿಜ್ಯ ಅಂಗಡಿಗಳನ್ನು ಒಳಗೊಂಡಿದ್ದು ಈ ರಸ್ತೆಯಲ್ಲಿ ದಿನನಿತ್ಯ ಹಳ್ಳಿಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬ್ಯಾಂಕ್ ವ್ಯವಹಾರಕ್ಕೆ ಆಗಮಿಸುತ್ತಿದ್ದು ಅಲ್ಲಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು ವಾಹನಗಳು ಸಂಚರಿಸಲು ಸಾದ್ಯವಾಗುತ್ತಿಲ್ಲ.


ಈ ಮಾರ್ಗದಲ್ಲಿ ದಿನನಿತ್ಯ ಹಳ್ಳಿಯಿಂದ ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುತ್ತಿದ್ದು ಅಲ್ಲದೇ ಪ್ರಸಿದ್ಧ ಪುಣ್ಯಕ್ಷೇತ್ರವಾದ ಹೇಮಗಿರಿ, ಶ್ರೀ ಚಂದಗೋಳಮ್ಮ ದೇವಾಸ್ಥಾನಕ್ಕೆ ಹೆಚ್ಚು ಭಕ್ತರು ಸಂಚರಿಸುತ್ತಿದ್ದು ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸಲು ಕಷ್ಟವಾಗಿದ್ದು ಅಂಗಡಿಯ ಮಾಲೀಕರು ಅಲ್ಲಲ್ಲಿ ಕಲ್ಲು-ಮಣ್ಣು ಹಾಕಿದರೂ ಸಹ ದಿನೇ ದಿನೇ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿದೆ, ಅಲ್ಲದೇ ಸ್ಥಳೀಯ ಜನಪ್ರತಿನಿಧಿಗಳು ಈ ರಸ್ತೆಯಲ್ಲೇ ಓಡಾಡುತ್ತಿದ್ದು ಯಾವುದೇ ಸಂಬಂಧವಿಲ್ಲದಂತೆ ಇರುವುದು ಬೇಸರದ ಸಂಗತಿ ಎಂದು ಸಾರ್ವಜನಿಕರು, ಅಂಗಡಿ ಮುಂಗಟ್ಟಿನ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ, ಮುಂದಿನ ದಿನಗಳಲ್ಲಾದರೂ ರಸ್ತೆಗಳ ಗುಂಡಿ ಮುಚ್ಚಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡುತ್ತಾರಾ..? ಕಾದು ನೋಡೋಣ..!

ಇತ್ತೀಚಿನ ಸುದ್ದಿ

ಜಾಹೀರಾತು